ಕರ್ನಾಟಕ

karnataka

ಪ್ರೇಮ ಪ್ರಕರಣ: ಯುವಕನನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಯುವತಿ ಸಂಬಂಧಿಕರು

By

Published : Nov 19, 2021, 12:31 PM IST

Updated : Nov 19, 2021, 12:56 PM IST

ತಮ್ಮ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ನಾಲ್ಕು ಮಂದಿ ಸೇರಿ ಕ್ರೂರವಾಗಿ ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಗುಜರಾತ್​ನ ವಡೋದಾ ಜಿಲ್ಲೆಯಲ್ಲಿ ಜರುಗಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

A 20 year old man allegedly beaten to death over love affair in Vadodara district
ಪ್ರೇಮ ಪ್ರಕರಣ

ವಡೋದರಾ: ಪ್ರೀತಿಯ ವಿಚಾರವಾಗಿ ಯುವತಿಯ ಸಂಬಂಧಿಕರು ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಪದ್ರಾ ತಹಸಿಲ್​ನ ಚೋಕರಿ ಗ್ರಾಮದಲ್ಲಿ ನಡೆದಿದ್ದು, ಹಲ್ಲೆಯ ವಿಡಿಯೋ ಈಗ ವೈರಲ್​ ಆಗಿದೆ.

20 ವರ್ಷದ ಜಯೇಶ್​ ರಾವಲ್​ ಎಂಬ ಯುವಕ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ತಿಳಿದು ಯುವತಿಯ ಮನೆಯವರು ಆತನನ್ನು ಅಪಹರಿಸಿ ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ್ದಾರೆ. ನಾಲ್ಕೈದು ಮಂದಿ ಸೇರಿ ಯುವಕನಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನು ಓದಿ-Repeal of 3 farm laws: ಅನ್ಯಾಯದ ವಿರುದ್ಧದ ವಿಜಯ ಎಂದ ರಾಗಾ ; ಸಂಸತ್ತಿನಲ್ಲಿ ಕೃಷಿ ಕಾನೂನುಗಳು ರದ್ದಾಗೋ ವರೆಗೂ ಪ್ರತಿಭಟನೆ - ಟಿಕಾಯತ್​

ಹಲ್ಲೆ ವೇಳೆ, ಜಯೇಶ್​ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ್ದಾನೆ. ಈ ವಿಚಾರವನ್ನು ತಿಳಿದ ಯುವಕನ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಡೋದರಾ ಎಸ್ಪಿ ಸ್ಥಳಕ್ಕೆ ಧಾವಿಸಿ ಯುವಕನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸದ್ಯ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ತಂದೆ ಸೇರಿ ನಾಲ್ಕು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Last Updated :Nov 19, 2021, 12:56 PM IST

ABOUT THE AUTHOR

...view details