ಕರ್ನಾಟಕ

karnataka

ಘಟಿಕೋತ್ಸವಕ್ಕೆ ಬಂದ ಪ.ಬಂ ರಾಜ್ಯಪಾಲರನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

By

Published : Jan 28, 2020, 3:09 PM IST

ಸಿಎಎ, ಎನ್​ಆರ್​​ಸಿಗೆ ರಾಜ್ಯಪಾಲ ಜಗದೀಪ್ ಧಂಕರ್ ಬೆಂಬಲ ವ್ಯಕ್ತಪಡಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ವಿವಿಗೆ ಬಂದ ರಾಜ್ಯಪಾಲರನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಪಶ್ಚಿಮ ಬಂಗಾಳದ ಜಾಧವ್​ಪುರ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

protest against WB governor
ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್

ಕೋಲ್ಕತ್ತಾ:ಜಾಧವ್​ಪುರ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಗಮಿಸಿದ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್​ರ ಕಾರನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಘಟಿಕೋತ್ಸವಕ್ಕೆ ಬಂದ ಪ.ಬಂ ರಾಜ್ಯಪಾಲರನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳ ಪ್ರತಿಭಟನೆ

ಧಂಕರ್​ರ ಕಾರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು, ಕೈಯಲ್ಲಿ ಫಲಕಗಳನ್ನು ಹಿಡಿದು, 'ರಾಜ್ಯಪಾಲರೇ ವಾಪಾಸು ಹೋಗಿ' (Governor Go Back) ಎಂದು ಘೋಷಣೆ ಕೂಗಿದರು. ಸಿಎಎ, ಎನ್​ಆರ್​​ಸಿಗೆ ಜಗದೀಪ್ ಧಂಕರ್ ಬೆಂಬಲ ವ್ಯಕ್ತಪಡಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ತಮ್ಮ ವಿವಿಗೆ ಬಂದ ರಾಜ್ಯಪಾಲರನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಜಾಧವ್​ಪುರ ವಿವಿ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು. ಈ ಹಿಂದೆ ಕೂಡ ವಿವಿಗೆ ಬಂದ ರಾಜ್ಯಪಾಲರನ್ನು 'ಬಿಜೆಪಿ ಕಾರ್ಯಕರ್ತ' ಎಂದು ಉಲ್ಲೇಖಿಸಿ ವಿದ್ಯಾರ್ಥಿಗಳು ವಾಪಸ್​​​ ಕಳುಹಿಸಿದ್ದರು.

ABOUT THE AUTHOR

...view details