ಕರ್ನಾಟಕ

karnataka

ಜಾರಿ ನಿರ್ದೇಶನಾಲಯ ಸಮನ್ಸ್​ ಹಿನ್ನೆಲೆ: ಇಡಿ ಕಚೇರಿಗೆ ಆಗಮಿಸಿದ ಲಕ್ಷ್ಮಿ ಹೆಬ್ಬಾಳ್ಕರ್

By

Published : Sep 19, 2019, 12:27 PM IST

ಡಿಕೆಶಿ ಅವರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಮನ್ಸ್​ ನೀಡಿದ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆಗೆ ಹಾಜರಾಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್

ನವದೆಹಲಿ:ಮಾಜಿ ಸಚಿವ ಡಿಕೆಶಿ ಅವರ ಅಕೌಂಟಿನಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ‌ಹೆಬ್ಬಾಳ್ಕರ್ ಅವರಿಗೆ ಇಡಿ ನೋಟಿಸ್ ಜಾರಿಗೊಳಿಸಿದ್ದು, ಲಕ್ಷ್ಮಿ ಹೆಬ್ಬಾಳ್ಕರ್ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಅಕೌಂಟ್​ನಿಂದ ಲಕ್ಷ್ಮಿ ಹೆಬ್ಬಾಳ್ಕರ್ ಖಾತೆಗೆ ಅಕ್ರಮ ಹಣ ವರ್ಗಾವಣೆ ‌ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.14 ರಂದೇ ಇಡಿ‌ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಮತ್ತೊಂದು‌ ದಿನ‌ ನೀಡುವಂತೆ ಹೆಬ್ಬಾಳ್ಕರ್ ಕೋರಿದ್ದರು. ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು.

ಈಗಾಗಲೆ ಲಕ್ಷ್ಮಿ ಹೆಬ್ಬಾಳ್ಕರ್​ ಜಾರಿ ನಿರ್ದೇಶನಾಲಯ ಕಚೇರಿ ತಲುಪಿದ್ದು, ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Intro:Body:Conclusion:

ABOUT THE AUTHOR

...view details