ನವದೆಹಲಿ: ನಾವು ಸ್ಥಳದಿಂದ ಕದಲುವುದಿಲ್ಲ, ಪ್ರತಿಭಟನೆಯನ್ನೂ ಕೈ ಬಿಡುವುದಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ದೆಹಲಿಯ ಗಡಿಭಾಗ ಗಾಝಿಪುರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಉತ್ತರಪ್ರದೇಶ ಪೊಲೀಸರು ಆದೇಶ ನೀಡಿದ್ದು, ರೈತರ ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ನೆರೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ರೈತ ನಾಯಕ ಹಾಗೂ ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಿಂದ ತೆರಳುವಂತೆ ನೋಟಿಸ್ ಬಂದಿದೆ. ಆದರೆ ನಾವು ಸ್ಥಳದಿಂದ ಕದಲುವುದಿಲ್ಲ, ನಮ್ಮನ್ನು ತೆರವುಗೊಳಿಸುವುದಿದ್ದರೆ ತೆರವುಗೊಳಿಸಲಿ ಎಂದಿದ್ದಾರೆ.