ಕರ್ನಾಟಕ

karnataka

ಗಣರಾಜ್ಯೋತ್ಸವ ಆಚರಣೆಗೆ ಶಾಲೆಗೆ ತೆರಳುತ್ತಿದ್ದ 14ರ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!

By

Published : Jan 27, 2023, 9:56 PM IST

ದೇಶದ ಗಣರಾಜ್ಯೋತ್ಸವದ ದಿನದಂದೇ ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಮಾನಗೇಡಿ ಘಟನೆ ವರದಿಯಾಗಿದೆ.

Etv Bharat
Etv Bharat

ಬಕ್ಸರ್ (ಬಿಹಾರ): ಬಿಹಾರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ಗಣರಾಜ್ಯೋತ್ಸವ ಆಚರಣೆಗೆಂದು ಗುರುವಾರ ಶಾಲೆಗೆ ತೆರಳುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಹೀನ ಕೃತ್ಯದ ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇಡೀ ದೇಶವು ಗುರುವಾರ ಗಣರಾಜ್ಯೋತ್ಸವ ಆಚರಣೆಯ ಸಂಭ್ರಮದಲ್ಲಿ ಇತ್ತು. ಇದೇ ವೇಳೆ, ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಅಪ್ತಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮಾನಗೇಡಿ ಘಟನೆ ವರದಿಯಾಗಿದೆ. ಇಲ್ಲಿನ ಸಿಕ್ರೌಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಣರಾಜ್ಯೋತ್ಸವ ನಿಮಿತ್ತ ಬಾಲಕಿ ಶಾಲೆಗೆ ಹೋಗುತ್ತಿದ್ದಾಗ ಮೂವರು ಆರೋಪಿಗಳು ಆಕೆಯನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಿಳಿಸಿದ್ದಾರೆ.

ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಕಾಮುಕರು ನಂತರ, ಸಂತ್ರಸ್ತೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಅಪ್ರಾಪ್ತ ಬಾಲಕಿ ಮನೆಗೆ ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾಳೆ. ಅಲ್ಲದೇ, ಇಷ್ಟರಲ್ಲಿ ಬಾಲಕಿಯ ಆರೋಗ್ಯ ಹದಗೆಟ್ಟಿದೆ. ಮತ್ತೊಂದೆಡೆ ಸಂತ್ರಸ್ತೆಯ ಸಂಬಂಧಿಕರು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದಾರೆ.

ಈ ದೂರಿನ ಮೇರೆಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಶುಕ್ರವಾರ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯ ಎಸಗಿದ ನಂತರ ಪರಾರಿಯಾಗಿದ್ದ ಆರೋಪಿಗಳ ಪತ್ತೆ ಹಚ್ಚಿ ಬಂಧಿಸಿ, ಅವರ ವಿರುದ್ಧ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಈ ಘಟನೆಯಲ್ಲಿ ಹೆಚ್ಚುವರಿ ಸುಳಿವುಗಳಿಗಾಗಿ ತನಿಖೆ ನಡೆಸುತ್ತಿದ್ದಾರೆ. ಈಗಾಲೇ ಈ ಪ್ರಕರಣದ ಸಂಬಂಧ ದೋಷಾರೋಪ ಪಟ್ಟಿಯನ್ನು ಸಹ ಸಿದ್ಧಪಡಿಸುತ್ತಿದ್ದಾರೆ. ಎಂದು ಎಸ್​​ಪಿ ಮನೀಶ್​ ಕುಮಾರ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:23 ವರ್ಷಗಳ ಹಿಂದೆ ಲವ್​ ಮ್ಯಾರೇಜ್; ಮಗಳೆದುರೇ ಮಡದಿಯ ಕೊಂದ ಪತಿ!

ಬಸ್​ನಲ್ಲಿ ಶಿಕ್ಷಕಿಯ ಮೇಲೆ ಅತ್ಯಾಚಾರ ಯತ್ನ: ಕಳೆದ ಮಂಗಳವಾರವಷ್ಟೇ ಬಿಹಾರದ ಪೂರ್ಣಿಯಾ ಜಿಲ್ಲೆಯಲ್ಲಿ ಚಲಿಸುತ್ತಿದ್ದ 35 ವರ್ಷದ ಶಿಕ್ಷಕಿಯೊಬ್ಬರು ಮೇಲೆ ಐವರು ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ವರದಿಯಾಗಿತ್ತು. ಡಾರ್ಜಿಲಿಂಗ್‌ನಿಂದ ಬಂದಿದ್ದ ಸಂತ್ರಸ್ತ ಶಿಕ್ಷಕಿ ಅಂದು ತಡರಾತ್ರಿ ತಮ್ಮ ಮೇಲಿನ ಅತ್ಯಾಚಾರಕ್ಕೆ ಯತ್ನವನ್ನು ತಪ್ಪಿಸಿಕೊಳ್ಳಲು ಬಸ್‌ನಿಂದ ಜಿಗಿದು ತೀವ್ರವಾಗಿ ಗಾಯಗೊಂಡಿದ್ದರು.

ನಾನು ಬಸ್​​ ಏರಿದಾ ಪ್ರಯಾಣಿಕರು ತುಂಬಿದ್ದರು. ಆದರೆ, ಸಮಯ ಕಳೆದಂತೆ ಬಸ್ ಖಾಲಿಯಾಗಲು ಪ್ರಾರಂಭಿಸಿತು. ನನ್ನನ್ನು ಒಬ್ಬಂಟಿಯಾಗಿ ನೋಡಿದ ಐವರು ಮೊದಲು ಅಶ್ಲೀಲ ಸನ್ನೆಗಳನ್ನು ಮಾಡಲು ಶುರು ಮಾಡಿದರು. ನಂತರ ನನ್ನ ಬಳಿಗೆ ಬಂದು ನನ್ನನ್ನು ಸುತ್ತುವರೆದರು. ಅಲ್ಲದೇ, ನನ್ನನ್ನು ಮುಟ್ಟಲು ಪ್ರಾರಂಭಿಸಿ, ಅತ್ಯಾಚಾರಕ್ಕೆ ಪ್ರಯತ್ನಿಸಿದರು. ಆಗ ಸಹಾಯವಂತೆ ನಾನು ಚಾಲಕ ಮತ್ತು ಕಂಡಕ್ಟರ್‌ಗೆ ಕೇಳಿಕೊಂಡಿದೆ. ಆದರೆ ಇಬ್ಬರು ಕೂಡ ಗಮನ ಹರಿಸಲಿಲ್ಲ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಚಾಲಕ ಮತ್ತು ಕಂಡಕ್ಟರ್‌ ನೆರವಿಗೆ ಬಾರದ ಕಾರಣ ನಾನು ಕಾಮುಕರ ಕೈಯಿಂದ ತಪ್ಪಿಸಿಕೊಳ್ಳಲು ಬಸ್​ನಿಂದ ಜಗಿಯಬೇಕಾಯಿತು ಎಂದೂ ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ವಿವರಿಸಿದ್ದರು. ಸದ್ಯ ಸಂತ್ರಸ್ತೆ ಗಂಭೀರ ಸ್ಥಿತಿಯಲ್ಲಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕೂಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

ಇದನ್ನು ಓದಿ:ಮರ್ಯಾದಾ ಹತ್ಯೆ: ಆಯುರ್ವೇದಿಕ್ ಮೆಡಿಸಿನ್ ಓದುತ್ತಿದ್ದ ಮಗಳನ್ನು ಹತ್ಯೆ ಮಾಡಿದ ಕುಟುಂಬಸ್ಥರು

ABOUT THE AUTHOR

...view details