ಕರ್ನಾಟಕ

karnataka

ವಿಧಾನಸಭೆ ಚುನಾವಣೆ ಮೇಲೆ ಕಣ್ಣು.. ಮೋದಿ ಆಪ್ತನಿಗೆ ಯುಪಿ BJP ಉಪಾಧ್ಯಕ್ಷನ ಪಟ್ಟ!

By

Published : Jun 19, 2021, 8:04 PM IST

ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಭಾರತೀಯ ಜನತಾ ಪಾರ್ಟಿ ಇನ್ನೊಂದು ಅವಧಿಗೆ ಸರ್ಕಾರ ರಚನೆ ಮಾಡುವ ಗುರಿ ಇಟ್ಟುಕೊಂಡಿದೆ. ಅದೇ ಕಾರಣಕ್ಕಾಗಿ ಇದೀಗ ಮೋದಿ ಆಪ್ತನಿಗೆ ಅಲ್ಲಿನ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

AK Sharma
AK Sharma

ಲಖನೌ(ಉತ್ತರ ಪ್ರದೇಶ):ಮುಂದಿನ ವರ್ಷ(2022) ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಭಾರತೀಯ ಜನತಾ ಪಾರ್ಟಿ, ಈಗಿನಿಂದಲೇ ಭರದ ತಯಾರಿ ನಡೆಸುತ್ತಿದೆ. ಅದಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಮಾಡಿ ನಿರ್ಧಾರ ಕೈಗೊಂಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಸಹಾಯಕರಾಗಿ ಗುರುತಿಸಿಕೊಂಡಿರುವ ಖ್ಯಾತ ಮಾಜಿ ಐಎಎಸ್​​ ಅಧಿಕಾರಿ ಮತ್ತು ಎಂಎಲ್​ಸಿ ಎಕೆ ಶರ್ಮಾ ಅವರನ್ನ ಅಲ್ಲಿನ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಉತ್ತರ ಪ್ರದೇಶ ವಿಧಾನ ಪರಿಷತ್​ನ ಸದಸ್ಯರಾಗಿರುವ ಎಕೆ ಶರ್ಮಾ, ಈಗಾಗಲೇ ಐಎಎಸ್​​ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಜತೆಗೆ ಮೋದಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿಂದಿನಿಂದಲೂ ಉತ್ತರ ಪ್ರದೇಶ ಸಚಿವ ಸಂಪುಟದಲ್ಲಿ ಅವರಿಗೆ ಮಂತ್ರಿಗಿರಿ ನೀಡಲಿದ್ದಾರೆ ಎಂಬ ಉಹಾಪೋಹ ಕೇಳುತ್ತಲೇ ಇದ್ದವು. ಆದರೆ ಇದೀಗ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಅವರಿಗೆ ಮೇಲ್ವಿಚಾರಣೆ ನೀಡಲಾಗಿತ್ತು. ಸದ್ಯ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧ್ಯಕ್ಷರಾಗಿ ಸ್ವತಂತ್ರ ದೇವ್ ಸಿಂಗ್​ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿರಿ: watch Video: ಹಿಂದೆ - ಮುಂದೆ ನೋಡದೇ ರಸ್ತೆ ದಾಟಲು ಹೋಗಿ ಬೈಕ್​ಗೆ ಡಿಕ್ಕಿ ಹೊಡೆದ ಯುವತಿ

2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಉದ್ದೇಶದಿಂದ ಇದೀಗ ಉತ್ತರ ಪ್ರದೇಶ ರಾಜ್ಯ ಬಿಜೆಪಿಯಲ್ಲಿ ಕೆಲವೊಂದು ಮಹತ್ವದ ಬದಲಾವಣೆ ಮಾಡಲಾಗಿದೆ. ಪಕ್ಷದ ಯುವ ಮೋರ್ಚಾ ಉಸ್ತುವಾರಿಯನ್ನ ಪ್ರಣ್ಶುದತ್ ದ್ವಿವೇದಿಗೆ, ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸಂಸದೆ ಗೀತಾ ಶಕ್ಯ, ಪರಿಶಿಷ್ಟ ಪಂಗಡದ ಮೋರ್ಚಾ ಅಧ್ಯಕ್ಷರಾಗಿ ಸಂಜಯ್​ ಗೋಂಡಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಅಧ್ಯಕ್ಷರನ್ನಾಗಿ ಕುನ್ವರ್​ ಬಸಿತ್​ ಅಲಿ ಅವರನ್ನ ನೇಮಕ ಮಾಡಲಾಗಿದೆ.

ABOUT THE AUTHOR

...view details