ಕರ್ನಾಟಕ

karnataka

ರಾತ್ರಿ ಕರ್ಫ್ಯೂ, ಬೆಳಗ್ಗೆ ಬೃಹತ್​​ ಚುನಾವಣಾ ರ್‍ಯಾಲಿ.. ಬಿಜೆಪಿ ವಿರುದ್ಧ ವರುಣ್​ ಗಾಂಧಿ ವಾಗ್ದಾಳಿ..

By

Published : Dec 27, 2021, 4:13 PM IST

Varun Gandhi dig at BJP : ಸದಾ ಒಂದಿಲ್ಲೊಂದು ವಿಚಾರವನ್ನಿಟ್ಟುಕೊಂಡು ತಮ್ಮ ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸುವ ಸಂಸದ ವರುಣ್​ ಗಾಂಧಿ, ಇದೀಗ ಉತ್ತರಪ್ರದೇಶದಲ್ಲಿ ಜಾರಿಗೊಳಿಸಲಾಗಿರುವ ನೈಟ್​​ ಕರ್ಫ್ಯೂ ವಿಷಯವನ್ನಿಟ್ಟುಕೊಂಡು ಹರಿಹಾಯ್ದಿದ್ದಾರೆ..

Varun Gandhi dig at BJP
Varun Gandhi dig at BJP

ನವದೆಹಲಿ :ದೇಶದಲ್ಲಿ ಒಮಿಕ್ರಾನ್ ಭೀತಿ ಹೆಚ್ಚಾಗುತ್ತಿದ್ದಂತೆ ಉತ್ತರಪ್ರದೇಶ, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈಗಾಗಲೇ ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೇ ವಿಚಾರವಾಗಿ ಬಿಜೆಪಿ ಸಂಸದ ವರುಣ್​ ಗಾಂಧಿ ಟ್ವೀಟ್ ಮಾಡಿ ಯುಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರಪ್ರದೇಶದಲ್ಲಿ ಅಧಿಕಾರ ನಡೆಸುತ್ತಿರುವ ಯೋಗಿ ಆದಿತ್ಯನಾಥ್​​ ಸರ್ಕಾರ ನೈಟ್​ ಕರ್ಫ್ಯೂ ಜಾರಿಗೊಳಿಸಿದೆ. ಆದರೆ, ಮುಂದಿನ ವರ್ಷದ ಆರಂಭದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ಕಾರಣ ಮೇಲಿಂದ ಮೇಲೆ ಬೃಹತ್​ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ವರುಣ್​ ಗಾಂಧಿ ಟ್ವೀಟ್ ಮಾಡಿದ್ದಾರೆ.

ಉತ್ತರಪ್ರದೇಶದಲ್ಲಿ ರಾತ್ರಿ ಸಮಯದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ, ಚುನಾವಣಾ ಪ್ರಚಾರಕ್ಕಾಗಿ ಅಥವಾ ದೊಡ್ಡ ಮಟ್ಟದ ರಾಜಕೀಯ ಸಮಾವೇಶಕ್ಕಾಗಿ ಬೆಳಗ್ಗೆ ಲಕ್ಷಾಂತರ ಜನರನ್ನ ಒಟ್ಟಿಗೆ ಕರೆತರಲಾಗುತ್ತಿದೆ.

ಇದು ಜನಸಾಮಾನ್ಯರ ಗ್ರಹಿಕೆಗೆ ಮೀರಿದ್ದು ಎಂದಿದ್ದಾರೆ. ಉತ್ತರಪ್ರದೇಶದ ಈ ವ್ಯವಸ್ಥೆ ನೋಡಿದರೆ ಬರುವ ದಿನಗಳಲ್ಲಿ ಖಂಡಿತವಾಗಿ ದೊಡ್ಡ ಮಟ್ಟದಲ್ಲಿ ಒಮಿಕ್ರಾನ್​​​ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ ಎಂದಿದ್ದಾರೆ.

ಇದನ್ನೂ ಓದಿರಿ:ಪಂಜಾಬ್​​ ಚುನಾವಣೆಗೂ ಮುನ್ನ AAPಗೆ ಆನೆಬಲ.. ಚಂಡೀಗಢ ಮುನ್ಸಿಪಲ್​ ಎಲೆಕ್ಷನ್​​ನಲ್ಲಿ ಭರ್ಜರಿ ಜಯಭೇರಿ

ಒಮಿಕ್ರಾನ್​ ತಡೆಯಲು ಉತ್ತರಪ್ರದೇಶದಲ್ಲಿ ಡಿಸೆಂಬರ್​ 25ರಿಂದ ನೈಟ್​ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ, ಮೇಲಿಂದ ಮೇಲೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಅನೇಕ ಕೇಂದ್ರ ಸಚಿವರು ಉತ್ತರಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ.

ದೊಡ್ಡ ದೊಡ್ಡ ಚುನಾವಣಾ ಪ್ರಚಾರ ಸಭೆ ನಡೆಸಲಾಗುತ್ತಿದೆ. ಇದೇ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಸಂಸದ ವರುಣ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ ಈ ಹಿಂದೆ ಕೂಡ ಕೃಷಿ ಕಾಯ್ದೆ ಸೇರಿದಂತೆ ಅನೇಕ ವಿಚಾರವಾಗಿ ವರುಣ್​ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಉದಾಹರಣೆಗಳಿವೆ.

ABOUT THE AUTHOR

...view details