ಕರ್ನಾಟಕ

karnataka

ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಕ್ಕೆ ಸಿಕ್ತು ಕಾರಣ!: ತನಿಖಾ ವರದಿಯಿಂದ ಬಹಿರಂಗ

By

Published : Jan 14, 2022, 7:58 PM IST

Updated : Jan 14, 2022, 8:29 PM IST

CDS chopper crash

ತಮಿಳುನಾಡಿನ ನೀಲಗಿರಿಯ ಕೂನೂರು ಎಂಬಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್​ ಪತನದ ತನಿಖೆಯ ವರದಿ ಇಂದು ಸಲ್ಲಿಕೆಯಾಗಿದ್ದು, ಯಾವ ಕಾರಣದಿಂದಾಗಿ ಅಪಘಾತ ಸಂಭವಿಸಿತು ಎಂಬ ಮಾಹಿತಿ ಬಹಿರಂಗಗೊಂಡಿದೆ.

ನವದೆಹಲಿ:ಸೇನಾ ಪಡೆಗಳ ಮೊದಲ ಮುಖ್ಯಸ್ಥ ಜನರಲ್‌ ಬಿಪಿನ್​ ರಾವತ್​, ಅವರ ಪತ್ನಿ ಸೇರಿದಂತೆ 13 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್​ ದುರಂತದ ತನಿಖಾ ವರದಿ ಇಂದು ಸಲ್ಲಿಕೆಯಾಗಿದ್ದು, ಅಪಘಾತಕ್ಕೆ ದಿಢೀರ್​ ಹವಾಮಾನ ವೈಪರೀತ್ಯವೇ ಕಾರಣ ಎಂದು ವರದಿಯಿಂದ ಬಹಿರಂಗಗೊಂಡಿದೆ.

ಡಿಸೆಂಬರ್​​ 8ರಂದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲ್ಲಿಂಗ್ಟನ್​​ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದ ವೇಳೆ ಕೂನೂರು ಎಂಬಲ್ಲಿ ಹೆಲಿಕಾಪ್ಟರ್ ಪತನವಾಗಿತ್ತು. ಈ ವೇಳೆ ಹೆಲಿಕಾಪ್ಟರ್​ನಲ್ಲಿದ್ದ ಬಿಪಿನ್​ ರಾವತ್​ ಹಾಗು ಅವರ ಪತ್ನಿ ಮಧುಲಿಕಾ ಸೇರಿದಂತೆ ಹಲವು ಸೇನಾ ಸಿಬ್ಬಂದಿ ವಿಧಿವಶರಾಗಿದ್ದರು. ಗ್ರೂಪ್ ಕ್ಯಾಪ್ಟನ್​​ ವರುಣ್​ ಸಿಂಗ್​ ಚಿಕಿತ್ಸೆ ಫಲಕಾರಿಯಾಗದೇ ವಾರದ ನಂತರ ಬೆಂಗಳೂರಿನಲ್ಲಿ ನಿಧನರಾಗಿದ್ದರು.

ಸೇನಾ ಹೆಲಿಕಾಪ್ಟರ್ ಪತನದ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಕೇಂದ್ರ ಸರ್ಕಾರ ಏರ್ ಮಾರ್ಷಲ್​ ಮನ್ವಿಂದರ್​ ಸಿಂಗ್ ನೇತೃತ್ವದ ತನಿಖಾ ತಂಡ ರಚಿಸಿತ್ತು. ಈ ತಂಡ ಇದೀಗ ತನಿಖೆ ನಡೆಸಿ ವರದಿ ಸಲ್ಲಿಸಿದೆ. ಡಿಸೆಂಬರ್​ 9ರಂದು ಬ್ಲಾಕ್ ಬಾಕ್ಸ್​ ವಶಕ್ಕೆ ಪಡೆದುಕೊಂಡು ಅನೇಕ ಆಯಾಮಗಳಿಂದ ತನಿಖೆ, ವಿಚಾರಣೆ ನಡೆಸಿದ್ದು ವಾಯುಪಡೆಯ ಹೆಡ್​​ ಕ್ವಾರ್ಟರ್ಸ್​ಗೆ ವರದಿ ಸಲ್ಲಿಸಿದೆ.

ಇದನ್ನೂ ಓದಿ:ಸೇನಾ ಹೆಲಿಕಾಪ್ಟರ್ ಪತನ ಪ್ರಕರಣ: ಮುಂದಿನ ವಾರ ತನಿಖಾ ವರದಿ ಸಲ್ಲಿಕೆ ಸಾಧ್ಯತೆ

ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳು:

ಪ್ರಾಥಮಿಕ ತನಿಖೆಯ ಪ್ರಕಾರ, ಅಪಘಾತಕ್ಕೆ ಯಾವುದೇ ತಾಂತ್ರಿಕ ವೈಫಲ್ಯ, ವಿಧ್ವಂಸಕ ಕೃತ್ಯ ಅಥವಾ ನಿರ್ಲಕ್ಷ್ಯ ಕಾರಣವಾಗಿಲ್ಲ. ಹೆಲಿಕಾಪ್ಟರ್​​ ತೆರಳುತ್ತಿದ್ದ ವೇಳೆ ಹವಾಮಾನದಲ್ಲಾದ ದಿಢೀರ್ ಬದಲಾವಣೆಯಿಂದಾಗಿಯೇ ಈ ಅವಘಡ ಸಂಭವಿಸಿದೆ. ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದಂತೆ ಸೇನಾ ಹೆಲಿಕಾಪ್ಟರ್ ಮೋಡಗಳೊಳಗೆ ಪ್ರವೇಶಿಸಿತು. ಇದರಿಂದ ಫೈಲಟ್​​ ವಿಚಲಿತಗೊಂಡಿದ್ದಾರೆ. ಹೀಗಾಗಿ ಅಪಘಾತ ಸಂಭವಿಸಿದೆ ಎಂದು ತನಿಖಾ ವರದಿಯಲ್ಲಿ ವಿವರಿಸಲಾಗಿದೆ.

ಸೇನಾ ಹೆಲಿಕಾಪ್ಟರ್ ಪತನದ ತನಿಖೆ ನಡೆಸಿರುವ ಮನ್ವಿಂದರ್​​​ ಸಿಂಗ್​ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್​ನ ಕಮಾಂಡಿಂಗ್​​ ಆಫೀಸರ್​​​​ ಆಗಿದ್ದಾರೆ. ಇವರು ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿಶೇಷವೆಂದರೆ, ಸಿಂಗ್‌ ಹೆಲಿಕಾಪ್ಟರ್​ ಪೈಲಟ್​​​ ಆಗಿದ್ದು, ವಿಶೇಷ ಅನುಭವ ಹೊಂದಿದ್ದಾರೆ.

Last Updated :Jan 14, 2022, 8:29 PM IST

ABOUT THE AUTHOR

...view details