ಕರ್ನಾಟಕ

karnataka

ಜಿ20 ಶೃಂಗಸಭೆ ನಡೆದ 'ಭಾರತ ಮಂಟಪ'ಕ್ಕೆ ನುಗ್ಗಿದ ಮಳೆ ನೀರು, ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

By ETV Bharat Karnataka Team

Published : Sep 10, 2023, 5:46 PM IST

ಭಾರತ ಅಧ್ಯಕ್ಷತೆಯ ಐತಿಹಾಸಿಕ ಜಿ20 ಶೃಂಗಸಭೆಯು ಇಲ್ಲಿನ ಭಾರತ ಮಂಟಪದಲ್ಲಿ ನಡೆಸಲಾಯಿತು. ನಿರಂತರವಾಗಿ ಸುರಿದ ಮಳೆಯಿಂದಾಗಿ ನೀರು ಇದೀಗ ಭಾರತ ಮಂಟಪಕ್ಕೆ ನುಗ್ಗಿದೆ.

ಭಾರತ ಮಂಟಪ'ಕ್ಕೆ ನುಗ್ಗಿದ ಮಳೆ ನೀರು
ಭಾರತ ಮಂಟಪ'ಕ್ಕೆ ನುಗ್ಗಿದ ಮಳೆ ನೀರು

ನವದೆಹಲಿ:ಅಮೆರಿಕ, ಇಂಗ್ಲೆಂಡ್​, ಫ್ರಾನ್ಸ್​ ಸೇರಿದಂತೆ ಹಲವು ರಾಷ್ಟ್ರಗಳ ನಾಯಕರು ಆಗಮಿಸಿದ್ದ ಐತಿಹಾಸಿಕ ಜಿ20 ಶೃಂಗಸಭೆ ನಡೆದ ಇಲ್ಲಿನ ಅನುಭವ ಮಂಟಪದೊಳಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಇದರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವಿಪಕ್ಷಗಳು ಇದನ್ನು ಟೀಕಿಸಿವೆ.

ದೆಹಲಿಯಲ್ಲಿ ಸತತ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ನಿರಂತರ ಮಳೆಯ ಕಾರಣ, ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆ ನಡೆದ ಭಾರತ ಮಂಟಪಕ್ಕೂ ಮಳೆ ನೀರು ನುಗ್ಗಿದೆ. ತಮ್ಮ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡದ್ದಕ್ಕೆ ಮುನಿಸಿಕೊಂಡಿರುವ ಕಾಂಗ್ರೆಸ್​ ಇದನ್ನೇ ಬಳಸಿಕೊಂಡು ಟೀಕೆ ನಡೆಸುತ್ತಿದೆ.

ಪಕ್ಷದ ಯುವ ಕಾಂಗ್ರೆಸ್ ಮುಖಂಡ ಶ್ರೀನಿವಾಸ್, ನೀರು ನುಗ್ಗಿದ ಭಾರತ ಮಂಟಪದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ವ್ಯಂಗ್ಯವಾಡಿದ್ದಾರೆ. 'ವಿಕಾಸ್' ನಿಜವಾಗಿಯೂ ಪ್ರಗತಿಯನ್ನು ಸಾಧಿಸುತ್ತಿದೆ. ಸರ್ಕಾರದ ಅಭಿವೃದ್ಧಿ ಭರವಸೆಗಳು ಮತ್ತು ಪ್ರಸಿದ್ಧ ಘೋಷಣೆಯಾದ 'ಸಬ್ಕಾ ಸಾಥ್, ಸಬ್ಕಾ ವಿಕಾಸ್' ಇದಾಗಿದೆ ಎಂದು ಹಾಸ್ಯ ಮಾಡಿದ್ದಾರೆ. ಸಭಾಂಗಣಗಳಿಗೆ ನುಗ್ಗಿದ ನೀರನ್ನು ಖಾಲಿ ಮಾಡುತ್ತಿರುವ ಚಿತ್ರಗಳನ್ನೂ ಕಾಂಗ್ರೆಸ್ ಹಂಚಿಕೊಂಡಿದೆ.

ಮಳೆ ನಡುವೆಯೇ ಐತಿಹಾಸಿಕ ಶೃಂಗ:ದೆಹಲಿ ಸೇರಿದಂತೆ ವಿವಿಧೆಡೆ ನಿರಂತರವಾಗಿ ಮಳೆಯಾಗುತ್ತಿದ್ದು, ಇದರ ನಡುವೆಯೇ ಐತಿಹಾಸಿಕ ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಜಾಗತಿಕ ಶೃಂಗಸಭೆಯ ಮೊದಲ ದಿನದ ಬಳಿಕವೂ ಮಳೆ ಕಡಿಮೆಯಾಗಿರಲಿಲ್ಲ. ಇದರ ಪರಿಣಾಮವಾಗಿ ರಾಷ್ಟ್ರ ರಾಜಧಾನಿಯ ವಿವಿಧ ಭಾಗಗಳು ಜಲಾವೃತಗೊಂಡವು. ಶೃಂಗಸಭೆಯ ಕಾರಣದಿಂದಾಗಿ ನಗರದಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿ ಮಾಡಿದ್ದರಿಂದ ಸಂಚಾರ ದಟ್ಟಣೆ ಕಂಡುಬರಲಿಲ್ಲ. ಮಳೆಯು ನಿರಂತರ ಸುರಿಯುತ್ತಿದ್ದರೂ, ಜಾಗತಿಕ ನಾಯಕರು ರಾಜ್​ಘಾಟ್​ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.

ಮುಳುಗಿದ ಭಾರತ ಮಂಟಪ ಚಿತ್ರ ಟ್ರೋಲ್​:ಜಿ20 ಶೃಂಗಸಭೆ ನಡೆದ ಸ್ಥಳವಾದ ಭಾರತ ಮಂಟಪ ಮಳೆ ನೀರಿನಲ್ಲಿ ಮುಳುಗಿದ ಚಿತ್ರಗಳನ್ನು ಇಟ್ಟುಕೊಂಡು ವಿಪಕ್ಷಗಳು ಮತ್ತು ನೆಟಿಜನ್‌ಳು ಟ್ರೋಲ್​ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಜಲಾವೃತವಾದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರೆ, ಜನರು ಪರಿಸ್ಥಿತಿಯನ್ನು ಕಂಡು ಹಾಸ್ಯ ಚಟಾಕಿ ಹಾರಿಸಿದ್ದಾರೆ.

ನಿರಂತರ ಮಳೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನ ನಿಯಂತ್ರಣದಲ್ಲಿದೆ. ಭಾನುವಾರ ಕನಿಷ್ಠ ತಾಪಮಾನವು 23.5 ಡಿಗ್ರಿ ಸೆಲ್ಸಿಯಸ್‌ನಷ್ಟಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ ವಾಡಿಕೆ ಮಳೆಗಿಂತ ಇದು ಕಡಿಮೆಯಾಗಿದೆ. ದೆಹಲಿಯಲ್ಲಿ 39 ಮಿ.ಮೀ ಮಳೆ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:G20: ಉಕ್ರೇನ್​ನಲ್ಲಿ ಶಾಂತಿ ಸ್ಥಾಪನೆಗೆ ಮೆಟ್ಟಿಲಾಗಲಿದೆ ನವದೆಹಲಿ ಘೋಷಣೆ; EU ವಿಶ್ವಾಸ

ABOUT THE AUTHOR

...view details