ಕರ್ನಾಟಕ

karnataka

ಮದ್ಯ ಹಗರಣ: ಮನೀಶ್ ಸಿಸೋಡಿಯಾ ಇತರರ 52 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

By

Published : Jul 7, 2023, 10:53 PM IST

ದೆಹಲಿ ಮದ್ಯ ಹಗರಣದಲ್ಲಿ ಇಡಿ ಶುಕ್ರವಾರ ಮಹತ್ವದ ಕ್ರಮ ಕೈಗೊಂಡಿದೆ. ಆರೋಪಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಸಿಸೋಡಿಯಾ ಮತ್ತು ಇತರ ಆರೋಪಿಗಳ 52 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಮದ್ಯ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಮಹತ್ವದ ಕ್ರಮ ಕೈಗೊಂಡಿದೆ. ಆರೋಪಿಗಳಾದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಅಮನದೀಪ್ ಸಿಂಗ್ ಧಲ್, ರಾಜೇಶ್ ಜೋಶಿ, ಗೌತಮ್ ಮಲ್ಹೋತ್ರಾ ಅವರ 52.24 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಈ ಪ್ರಕರಣದಲ್ಲಿ ಈವರೆಗೆ 128.78 ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಹೇಳಿಕೆ ನೀಡಿದೆ.

ಮನೀಶ್ ಸಿಸೋಡಿಯಾ ಮತ್ತು ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಎರಡು ಆಸ್ತಿಗಳು, ಮತ್ತೋರ್ವ ಆರೋಪಿ ರಾಜೇಶ್ ಜೋಷಿ (ರಥ ನಿರ್ಮಾಣದ ನಿರ್ದೇಶಕ) ಭೂಮಿ ಸೇರಿದಂತೆ ಇತರ ಸ್ಥಿರಾಸ್ತಿಗಳನ್ನು (ರೂ. 7.29 ಕೋಟಿ ಮೌಲ್ಯದ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಜಪ್ತಿ ಮಾಡಲು ಅಂತಿಮ ಆದೇಶ ಹೊರಡಿಸಲಾಗಿದೆ. ಫ್ಲಾಟ್ ರೂ. ಮೀಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಗೌತಮ್ ಮಲ್ಹೋತ್ರಾ ಅವರ ಭೂಮಿ/ಫ್ಲಾಟ್​ಗಳನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ಅಬಕಾರಿ ನೀತಿ ಮದ್ಯ ಹಗರಣ : ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಮನೀಶ್ ಸಿಸೋಡಿಯಾ

11 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ವಶ:ಜಪ್ತಿ ಮಾಡಿರುವ ಆಸ್ತಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅವರ ಪತ್ನಿ ಸೀಮಾ ಸಿಸೋಡಿಯಾ ಅವರ ಎರಡು ಆಸ್ತಿ ಹಾಗೂ 11 ಲಕ್ಷ ರೂ. 44.29 ಕೋಟಿ ಚರಾಸ್ತಿ ಸೇರಿದಂತೆ ಬ್ರಿಂಡ್ಕೋ ಸೇಲ್ಸ್ ಪ್ರೈವೇಟ್ ಲಿಮಿಟೆಡ್‌ನ ಬ್ಯಾಂಕ್​​ ಬ್ಯಾಲೆನ್ಸ್ ಕೂಡ ಈ ಜಪ್ತಿಯಲ್ಲಿ ಸೇರಿದೆ.

ಇದನ್ನೂ ಓದಿ:ಬೆಂಗಳೂರು: ಸಿಸೋಡಿಯಾ ಬಂಧನ ಖಂಡಿಸಿ ಬಿಜೆಪಿ ಕಚೇರಿಯೆದುರು ಆಪ್ ಪ್ರತಿಭಟನೆ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಸಿಸೋಡಿಯಾ ಮತ್ತು ಇತರರು ದೆಹಲಿಯಲ್ಲಿ ಹೊಸ ಮದ್ಯ ಮಾರಾಟ ನೀತಿಯನ್ನು ಜಾರಿಗೆ ತರುವ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿದ್ದಾರೆ. ಅವ್ಯವಹಾರ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಕಳೆದ ವರ್ಷ ಸಿಬಿಐ ತನಿಖೆಗೆ ಆದೇಶಿಸಿದ್ದರು. ಇದಾದ ನಂತರ ದೆಹಲಿ ಸರ್ಕಾರವು ಹಳೆಯ ಮದ್ಯದ ನೀತಿಯನ್ನೇ ಉಳಿಸಿಕೊಂಡಿತ್ತು. ಈ ಮಧ್ಯೆ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ದೆಹಲಿ ಸರ್ಕಾರವು ಹಳೆಯ ಮದ್ಯ ಮಾರಾಟ ನೀತಿಗೆ ಮರಳಿದೆ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿತ್ತು.

ಇದನ್ನೂ ಓದಿ:5 ದಿನ ಸಿಬಿಐ ಕಸ್ಟಡಿಗೆ ದೆಹಲಿ ಸಚಿವ ಮನೀಶ್​ ಸಿಸೋಡಿಯಾ; ಆಪ್​ನಿಂದ ತೀವ್ರ ಪ್ರತಿಭಟನೆ

ಸಿಸೋಡಿಯಾ ಅವರು ಮಾರ್ಚ್ 9 ರಿಂದ ಮದ್ಯದ ಹಗರಣದಲ್ಲಿ ಇಡಿ ನ್ಯಾಯಾಂಗ ಬಂಧನದಲ್ಲಿ ತಿಹಾರ್ ಜೈಲಿನಲ್ಲಿದ್ದಾರೆ. ನಿನ್ನೆ ಅಂದರೆ ಗುರುವಾರ ತಡರಾತ್ರಿ ಈ ಪ್ರಕರಣದಲ್ಲಿ ಉದ್ಯಮಿ ದಿನೇಶ್ ಅರೋರಾ ಅವರನ್ನೂ ಇಡಿ ಬಂಧಿಸಿದೆ.

ಇದನ್ನೂ ಓದಿ:ಅಬಕಾರಿ ನೀತಿ ಹಗರಣ ಪ್ರಕರಣ: ಸಿಸೋಡಿಯಾಗೆ ಜೂನ್ 2ರವರೆಗೆ ನ್ಯಾಯಾಂಗ ಬಂಧನ

ABOUT THE AUTHOR

...view details