ಕರ್ನಾಟಕ

karnataka

ಯುನಿಟೆಕ್​ ಹಗರಣದ ಆರೋಪಿಗಳಿಗೆ ಸಹಕಾರ ನೀಡಿದ ಆರೋಪ: ತಿಹಾರ್ ಜೈಲಿನ 32 ಅಧಿಕಾರಿಗಳ ವಿರುದ್ಧ ಎಫ್​ಐಆರ್​

By

Published : Oct 13, 2021, 2:29 PM IST

ಯುನಿಟೆಕ್​​ನ ಹಗರಣದ ಆರೋಪಿಗಳಾದ ಅಜಯ್ ಚಂದ್ರ ಮತ್ತು ಸಂಜಯ್ ಚಂದ್ರ ಅವರಿಗೆ ಜೈಲಿನಲ್ಲೇ ಭ್ರಷ್ಟಾಚಾರ ಮಾಡಲು ಸಹಾಯ ಮಾಡುತ್ತಿದ್ದ ಆರೋಪದಲ್ಲಿ 32 ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

FIR against 32 Tihar jail officials involved in helping ex-Unitech promoters
ಯುನಿಟೆಕ್​ ಹಗರಣದ ಆರೋಪಿಗಳಿಗೆ ಸಹಕಾರ ನೀಡಿದ ಆರೋಪ: ತಿಹಾರ್ ಜೈಲಿನ 32 ಅಧಿಕಾರಿಗಳ ವಿರುದ್ಧ ಎಫ್​ಐಆರ್​

ನವದೆಹಲಿ:ರಿಯಲ್ ಎಸ್ಟೇಟ್ ಕಂಪನಿ ಯುನಿಟೆಕ್​​ನ ಹಗರಣದ ಆರೋಪಿಗಳಾದ ಅಜಯ್ ಚಂದ್ರ ಮತ್ತು ಸಂಜಯ್ ಚಂದ್ರ ಅವರಿಗೆ ಸಹಾಯ ಮಾಡುತ್ತಿದ್ದ ಆರೋಪದ ಮೇಲೆ ತಿಹಾರ್ ಜೈಲಿನ 32 ಅಧಿಕಾರಿಗಳ ವಿರುದ್ಧ ಎಫ್​​ಐಆರ್ ದಾಖಲಾಗಿದೆ.

ಸುಪ್ರೀಂಕೋರ್ಟ್​ನ ಆದೇಶದ ಮೇರೆಗೆ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ಥಾನಾ ಅವರು ನಡೆಸಿದ ತನಿಖೆಯಲ್ಲಿ ತಿಹಾರ್ ಜೈಲಿನಲ್ಲಿರುವ ಇಬ್ಬರೂ ಆರೋಪಿಗಳಿಗೆ ಅಧಿಕಾರಿಗಳು ಸಹಕಾರ ನೀಡಿದ್ದಾರೆಂಬ ವಿಚಾರ ಬೆಳಕಿಗೆ ಬಂದಿದೆ.

ತಿಹಾರ್ ಜೈಲಿನಿಂದಲೇ ಭ್ರಷ್ಟಾಚಾರ ನಡೆಸುತ್ತಿರುವ ಆರೋಪ ಅಜಯ್ ಚಂದ್ರ ಮತ್ತು ಸಂಜಯ್ ಚಂದ್ರ ಅವರ ಮೇಲಿತ್ತು. ಆ ಭ್ರಷ್ಟಾಚಾರಕ್ಕೆ ಜೈಲಿನ ಅಧಿಕಾರಿಗಳು ಸಹಕಾರ ನೀಡಿದ್ದರೆಂದು ಕೂಡಾ ಆರೋಪ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸ್ ಅಪರಾಧ ವಿಭಾಗವು ಭ್ರಷ್ಟಾಚಾರ ತಡೆ ಕಾಯಿದೆಯ ವಿವಿಧ ಸೆಕ್ಷನ್​​ಗಳ ಅಡಿಯಲ್ಲಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ತಿಹಾರ್ ಜೈಲಿನ ಭ್ರಷ್ಟಾಚಾರದ ಬಗ್ಗೆ ವಿಚಾರಣೆ ನಡೆಸಿದ್ದ, ಸುಪ್ರೀಂಕೋರ್ಟ್ ಎಲ್ಲಾ ಆರೋಪಿ ಅಧಿಕಾರಿಗಳನ್ನು ಅಮಾನತು ಮಾಡಿ, ಸಂಪೂರ್ಣ ತನಿಖೆಗೆ ಆದೇಶ ನೀಡಿತ್ತು.

ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ತಿಹಾರ್ ಜೈಲಿನ 32 ಅಧಿಕಾರಿಗಳ ವಿರುದ್ಧ ಎಫ್​ಐಆರ್​ ದಾಖಲು ಮಾಡಲಾಗಿದ್ದು, ತನಿಖೆ ತೀವ್ರಗೊಳಿಸಲಾಗಿದೆ.

ಇದನ್ನೂ ಓದಿ:ನೇಪಾಳದಲ್ಲಿ ಭೀಕರ ರಸ್ತೆ ಅಪಘಾತ: 32 ಮಂದಿ ದುರ್ಮರಣ

ABOUT THE AUTHOR

...view details