ಕರ್ನಾಟಕ

karnataka

UP Polls : ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಪೊಲೀಸ್​ ಆಯುಕ್ತ

By

Published : Jan 16, 2022, 12:02 PM IST

ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ಕಾನ್ಪುರದ ಪೊಲೀಸ್​ ಆಯುಕ್ತ ಅಸಿಮ್ ಅರುಣ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಷ್ಟ್ರದ ಅಭಿವೃದ್ಧಿಗೆ ಹೊಸ ಮಾರ್ಗವನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಭಾವಿತನಾಗಿರುವುದಾಗಿ ತಿಳಿಸಿದ್ದಾರೆ..

asim
ಅಸಿಮ್ ಅರುಣ್

ಲಖನೌ (ಉತ್ತರ ಪ್ರದೇಶ):ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಇಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಸಿಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು.

ಕಾನ್ಪುರದ ಪೊಲೀಸ್​ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸಿಮ್ ಅರುಣ್ ಅವರು ಈ ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇಂದು ಲಖನೌದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಅವರು, "ರಾಷ್ಟ್ರದ ಅಭಿವೃದ್ಧಿಗೆ ಹೊಸ ಮಾರ್ಗವನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಂದ ನಾನು ಪ್ರಭಾವಿತನಾಗಿದ್ದೇನೆ.

ಸಾಮಾಜಿಕ ಕಾರ್ಯಗಳಿಗೆ ಹೆಚ್ಚಿನ ಕೊಡುಗೆ ನೀಡಲು ರಾಜಕೀಯಕ್ಕೆ ಸೇರಲು ಬಿಜೆಪಿ ನನಗೆ ಸಲಹೆ ನೀಡಿದೆ. ನನ್ನ ಕೆಲಸದ ಅವಧಿಯಲ್ಲಿ ನಾನು ಮಾಡಲು ಸಾಧ್ಯವಾಗದಿರುವುದು ಬಹಳಷ್ಟಿದೆ. ಹಾಗಾಗಿ, ನಾನು ರಾಜಕೀಯಕ್ಕೆ ಪ್ರವೇಶಿಸಲು ನಿರ್ಧರಿಸಿದ್ದೇನೆ " ಎಂದು ಹೇಳಿದರು.

ಇದನ್ನೂ ಓದಿ:ಉನ್ನಾವೋ ರೇಪ್​​ ಸಂತ್ರಸ್ತೆಯ ತಾಯಿ ವಿರುದ್ಧ ಎಸ್​ಪಿ ಸ್ಪರ್ಧಿಸಲ್ಲ: ಅಖಿಲೇಶ್​ ಯಾದವ್​​ ಘೋಷಣೆ

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಮೊನ್ನೆಯಷ್ಟೇ ಬಿಜೆಪಿ ತನ್ನ 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ ಮತ್ತು 21 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ABOUT THE AUTHOR

...view details