ಕರ್ನಾಟಕ

karnataka

ಶೋಪಿಯಾನ್ ಎನ್‌ಕೌಂಟರ್‌: ನಾಲ್ವರು ಉಗ್ರರ ಹೊಡೆದುರುಳಿಸಿದ ಸೇನೆ

By

Published : Apr 14, 2022, 7:27 PM IST

ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ನಾಲ್ವರು ಭಯೋತ್ಪಾದಕರ ಹೊಡೆದುರುಳಿಸುವಲ್ಲಿ ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ.

Four militants have been killed in badigam
Four militants have been killed in badigam

ಶ್ರೀನಗರ(ಜಮ್ಮು-ಕಾಶ್ಮೀರ):ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಬಡಿಗಮ್​ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ. ಇನ್ನೊಂದೆಡೆ, ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಸ್ಥಳಕ್ಕೆ ತೆರಳುತ್ತಿದ್ದಾಗ ಯೋಧರ ವಾಹನ ಅಪಘಾತಕ್ಕೀಡಾಗಿ ಇಬ್ಬರು ಯೋಧರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಯೋಧರು ಕಾರ್ಯಾಚರಣೆ ನಡೆಸಿದ್ದು, ಇಲ್ಲಿಯವರೆಗೆ ನಾಲ್ವರ ಹೆಡೆಮುರಿ ಕಟ್ಟಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಬಡಿಗಮ್​ನಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಉಗ್ರರು ಅಡಗಿ ಕುಳಿತಿದ್ದ ಜಾಗಕ್ಕೆ ಯೋಧರು ಆಗಮಿಸುತ್ತಿದ್ದಂತೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ನಡೆದ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ:ಸೇನಾ ವಾಹನ ಅಪಘಾತ: ಇಬ್ಬರು ಯೋಧರ ಸಾವು, ನಾಲ್ವರು ಗಂಭೀರ

ಬಡಿಗಾಮ್​ ಗುಂಡಿನ ಘರ್ಷಣೆ ಸ್ಥಳಕ್ಕೆ ಟಾಟಾ ಸುಮೋದಲ್ಲಿ ಯೋಧರನ್ನು ಕರೆದುಕೊಂಡು ಹೋಗ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದಕೊಂಡ ವಾಹನ ಸ್ಕಿಡ್​ ಆಗಿದೆ. ಈ ವೇಳೆ ಇಬ್ಬರುು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details