ನವದೆಹಲಿ/ಗಾಜಿಯಾಬಾದ್:ಕೇಂದ್ರ ಸರ್ಕಾರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಭಾರತೀಯ ಕಿಸಾನ್ ಯೂನಿಯನ್ (BKU) ನ ರಾಷ್ಟ್ರೀಯ ವಕ್ತಾರ ಮತ್ತು ರೈತ ನಾಯಕ ರಾಕೇಶ್ ಟಿಕಾಯತ್ ಆರೋಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಭಾರತ ಸರ್ಕಾರವು ಡಿಸೆಂಬರ್ 9ರ ಪತ್ರದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಈ ಕಾರಣಕ್ಕೆ ನಾವು ದೇಶಾದ್ಯಂತ ಸಂಚರಿಸಿ ಅನ್ನದಾತನ ಹಿತಾಸಕ್ತಿಗಳನ್ನು ರಕ್ಷಿಸುತ್ತೇವೆ ಎಂದಿದ್ದಾರೆ.