ಕರ್ನಾಟಕ

karnataka

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇನ್ಸ್​ಪೆಕ್ಟರ್​ ಅಮಾನತು

By

Published : Jul 9, 2022, 4:52 PM IST

Hyderabad: Maredupalli-ci-suspended-on-allegations-of-raping-a-woman
ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇನ್ಸ್​ಪೆಕ್ಟರ್​ ಅಮಾನತು

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ ಮತ್ತು ಅವರ ಪತಿ ಮೇಲೆ ಹಲ್ಲೆ ಆರೋಪದ ಮೇಲೆ ಹೈದರಾಬಾದ್​ ಪೊಲೀಸ್​ ಅಧಿಕಾರಿಯೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಹೈದರಾಬಾದ್​ (ತೆಲಂಗಾಣ): ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹೈದರಾಬಾದ್​ನ ಮರೇಡಪಲ್ಲಿ ಇನ್ಸ್​ಪೆಕ್ಟರ್​ ನಾಗೇಶ್ವರ್​​ ರಾವ್​ರನ್ನು ಪೊಲೀಸ್​ ಕಮಿಷನರ್ ಸಿ.ವಿ.ಆನಂದ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮರೇಡಪಲ್ಲಿ ಪೊಲೀಸ್ ಇನ್ಸ್​ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ನಾಗೇಶ್ವರ್ ರಾವ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಜುಲೈ 7ರಂದು ಮಹಿಳೆಯೊಬ್ಬರು ವನಸ್ಥಲಿಪುರಂ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ, ತನ್ನ ಪತಿ ಮೇಲೂ ಹಲ್ಲೆ ಮಾಡಲಾಗಿದೆ ಎಂದು ಮಹಿಳೆ ಆರೋಪಿಸಿದ್ದು,ಈ ಸಂಬಂಧ ವನಸ್ಥಲಿಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಇದೇ ಪ್ರಕರಣದಲ್ಲಿ ನಾಗೇಶ್ವರ್ ರಾವ್​ರನ್ನು ಪೊಲೀಸರು ಬಂಧಿಸುವ ಸಾಧ್ಯತೆಯೂ ಇದೆ.

ಅಲ್ಲದೇ, ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ನಾಗೇಶ್ವರ್​ ರಾವ್ ಕಾರಿನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗುತ್ತಿದ್ದರು. ಆದರೆ, ಈ ವೇಳೆ ಇಬ್ರಾಹಿಂಪಟ್ಟಣದಲ್ಲಿ ಕಾರು ಅಪಘಾತಕ್ಕೀಡಾಯಿತು. ಇದರಿಂದ ತಾವು ತಪ್ಪಿಸಿಕೊಂಡು ಬಂದಿದ್ದೇವೆ. ಇಷ್ಟೇ ಅಲ್ಲ, ಬಂದೂಕಿನಿಂದ ನಮಗೆ ಇನ್ಸ್​ಪೆಕ್ಟರ್ ಬೆದರಿಸಿದ್ದಾರೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಈ ದೂರಿನ ಆಧಾರದ ಮೇಲೆ ಅತ್ಯಾಚಾರ, ಕೊಲೆ ಯತ್ನ, ಅಪಹರಣ ಆರೋಪದಡಿ ಪ್ರಕರಣ ದಾಖಲಿಸಿಕೊಂಡು, ಇನ್ಸ್​ಪೆಕ್ಟರ್​ ನಾಗೇಶ್ವರ್​​ ರಾವ್​ರನ್ನು ಅಮಾನತುಗೊಳಿಸಲಾಗಿದೆ. ಸದ್ಯ ಆರೋಪಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ. ಇತ್ತ, ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಲಾಗಿದೆ.

ಇದನ್ನೂ ಓದಿ:ಮಾದಕ ವಸ್ತು ಸರಬರಾಜು ಆರೋಪಿಗಳಿಗೆ ಸಿಸಿಬಿಯಿಂದ ಆಸ್ತಿ ಮುಟ್ಟುಗೋಲು ಅಸ್ತ್ರ

ABOUT THE AUTHOR

...view details