ಕರ್ನಾಟಕ

karnataka

ಅಬಕಾರಿ ನೀತಿ ಪ್ರಕರಣ: ED ಕಳುಹಿಸಿದ ಸಮನ್ಸ್‌ ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತ.. ಕೇಜ್ರಿವಾಲ್

By ETV Bharat Karnataka Team

Published : Dec 21, 2023, 12:15 PM IST

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಕಳುಹಿಸಿದ ಸಮನ್ಸ್‌ಗೆ ಸಿಎಂ ಕೇಜ್ರಿವಾಲ್ ಇಡಿಗೆ ಉತ್ತರ ಬರೆದಿದ್ದಾರೆ.

ಸಿಎಂ ಅರವಿಂದ್​ ಕೇಜ್ರಿವಾಲ್
ಸಿಎಂ ಅರವಿಂದ್​ ಕೇಜ್ರಿವಾಲ್

ನವದೆಹಲಿ:ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್ ಇಡಿಗೆ ಉತ್ತರ ಬರೆದಿದ್ದಾರೆ.

ಡಿಸೆಂಬರ್ 21ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರಿಗೆ ಎರಡನೇ ಬಾರಿಗೆ ಸಮನ್ಸ್​ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಿದ ಅವರು, ಹಿಂದೆ ನೀಡಿರುವ ಸಮನ್ಸ್‌ಗಳಂತೆ, ಇದು ಕೂಡ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಸಮನ್ಸ್​ ಅನ್ನು ಇಡಿ ಹಿಂಪಡೆಯಬೇಕು. ತಾವೂ ಪ್ರಾಮಾಣಿಕ ಮತ್ತು ಪಾರದರ್ಶಕತೆಯಿಂದ ಬದುಕಿದ್ದು, ತಮ್ಮ ಬಳಿ ಮುಚ್ಚಿಡಲು ಏನೂ ಇಲ್ಲ. ಅಲ್ಲದೇ ಯಾವುದೇ ಸಮನ್ಸ್​ ಸ್ವೀಕರಿಸಲು ಸಿದ್ದ ಎಂದು ಉತ್ತರ ಬರೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿದಂತೆ ಇಡಿ ಕಳುಹಿಸಿದ ಎರಡನೇ ಸಮನ್ಸ್‌ನಲ್ಲಿಯೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಲಿಲ್ಲ. ಪೂರ್ವ ನಿರ್ಧರಿತ ವೇಳಾಪಟ್ಟಿಯಂತೆ, ಬುಧವಾರ ಅವರು 10 ದಿನಗಳ ಕಾಲ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ತೆರಳಿದ್ದಾರೆ. ಡಿಸೆಂಬರ್ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್​ ನೀಡಿತ್ತು.

ಈ ಪ್ರಕರಣದಲ್ಲಿಯೇ ಸಿಬಿಐ ಕೇಜ್ರಿವಾಲ್ ಅವರನ್ನು ಕಳೆದ ಏಪ್ರಿಲ್‌ನಲ್ಲಿ ವಿಚಾರಣೆ ನಡೆಸಿತ್ತು. ಇದಾದ ಬಳಿಕ ಇಡಿ ನೋಟಿಸ್ ಜಾರಿ ಮಾಡಿತ್ತು. ನವೆಂಬರ್ 2ರಂದು ಮೊದಲ ಬಾರಿಗೆ ವಿಚಾರಣೆಗೆ ಕರೆದಿತ್ತು. ಕೇಜ್ರಿವಾಲ್ ವಿಪಶ್ಶನ ಧ್ಯಾನಕ್ಕಾಗಿ ಹಿಮಾಚಲ, ಬೆಂಗಳೂರು ಮತ್ತು ಮಹಾರಾಷ್ಟ್ರದ ಸ್ಥಳಗಳಲ್ಲಿ ಒಂದಕ್ಕೆ ಹೋಗುತ್ತಿದ್ದರು. ಆದರೆ, ಈ ಬಾರಿ ಪಂಜಾಬ್‌ನ ಹೋಶಿಯಾರ್‌ಪುರಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ವಿಪಶ್ಶನ ಧ್ಯಾನದ ನಿಯಮಗಳ ಪ್ರಕಾರ, ಕೇಜ್ರಿವಾಲ್ ಮುಂದಿನ 10 ದಿನಗಳವರೆಗೆ ಯಾರೊಂದಿಗೂ ಸಂಪರ್ಕದಲ್ಲಿರುವುದಿಲ್ಲ. ಅವರ ಅನುಪಸ್ಥಿತಿಯಲ್ಲಿ ಸಚಿವ ಅತಿಶಿ ಸರ್ಕಾರದ ಕೆಲಸ ಕಾರ್ಯಗಳನ್ನು ನಿರ್ವಹಿಸಲಿದ್ದಾರೆ.

ಏನಿದು ಪ್ರಕರಣ?: ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿತ್ತು ಮತ್ತು ಅದಕ್ಕಾಗಿ ಲಂಚವನ್ನು ನೀಡಿದ ಕೆಲವು ಡೀಲರ್‌ಗಳಿಗೆ ಒಲವು ತೋರಿತ್ತು ಎಂದು ಆರೋಪಿಸಲಾಗಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಇದನ್ನು ಪದೇ ಪದೆ ನಿರಾಕರಿಸಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ಪ್ರಕರಣ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಶಿಫಾರಸು ಮಾಡಿದರು. ಕಳೆದ ವರ್ಷ ಆಗಸ್ಟ್ 17 ರಂದು ಸಿಬಿಐ ಎಫ್‌ಐಆರ್ ದಾಖಲಿಸಿದೆ.

ಇದನ್ನೂ ಓದಿ:ಬಲ್ವಂತ್ ಸಿಂಗ್ ರಾಜೋನಾ ಕ್ಷಮಾದಾನ ಅರ್ಜಿ: ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಹೇಳಿದ್ದೇನು?

ABOUT THE AUTHOR

...view details