ಕರ್ನಾಟಕ

karnataka

ಪ್ರಾಣ ಪಣಕ್ಕಿಟ್ಟು ನೀರಿನ ನಡುವೆ ಸಿಲುಕಿದ್ದ ನಾಯಿಮರಿ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

By

Published : Jul 13, 2023, 1:38 PM IST

Updated : Jul 13, 2023, 1:51 PM IST

ನೀರಿನ ನಡುವೆ ಸಿಲುಕಿದ್ದ ನಾಯಿಯನ್ನು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿದ್ದಾರೆ.

ನೀರಿನ ನಡುವೆ ಸಿಲುಕಿದ ನಾಯಿಯ ರಕ್ಷಣೆ
ನೀರಿನ ನಡುವೆ ಸಿಲುಕಿದ ನಾಯಿಯ ರಕ್ಷಣೆ

ಚಂಡೀಗಢ:ಭಾರತದ ಹಲವಾರು ರಾಜ್ಯಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ನದಿ ಕೆರೆಗಳು ಉಕ್ಕಿ ಪ್ರವಾಹಗಳು ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯ ತೀವ್ರತೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಇದೀಗ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಚಂಡೀಗಢದಲ್ಲಿ ನೀರಿನ ನಡುವೆ ಸಿಲುಕಿಕೊಂಡಿದ್ದ ನಾಯಿ ಮರಿಯೊಂದನ್ನು ಅಗ್ನಿಶಾಮಕ ಸಿಬ್ಬಂದಿಯೊಬ್ಬರು ತಮ್ಮ ಪ್ರಾಣ ಪಣಕ್ಕಿಟ್ಟು ರಕ್ಷಣೆ ಮಾಡಿದ್ದಾರೆ.

ಇಲ್ಲಿಯ ಖುದಾ ಲಾಹೋರ್​ ಎಂಬ ಸೇತುವೆಯ ಕೆಳಗೆ ಸಿಲುಕಿದ್ದ ನಾಯಿ ನೀರಿನ ಹರಿವಿನಿಂದ ಹೊರಬರಲು ಆಗದೇ ಪರದಾಡಿದೆ. ಇದನ್ನು ಕಂಡ ಅಗ್ನಿಶಾಮಕ ಇಲಾಖೆ ಸಿಬ್ಬಂದಿಯೊಬ್ಬರು ಜೀವದ ಹಂಗು ತೊರೆದು ಅದರ ರಕ್ಷಣೆಗೆ ಮುಂದಾಗಿದ್ದಾರೆ. ಏಣಿಯ ಸಹಾಯದಿಂದ ಸೇತುವೆ ಕೆಳಗೆ ಇಳಿದು ನಾಯಿಯನ್ನು ಸುರಕ್ಷಿತವಾಗಿ ಮೇಲೆ ತಂದು ಜೀವ ಉಳಿಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ಅಗ್ನಿಶಾಮಕ ಸಿಬ್ಬಂದಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಚಂಡೀಗಢ ಪೊಲೀಸ್​ ಇಲಾಖೆ ಟ್ವಿಟ್ಟರ್​ ಖಾತೆಯಲ್ಲಿ ಹಂಚಿಕೊಂಡಿದ್ದು, "ಚಂಡೀಗಢ ಪೊಲೀಸ್ ಇಲಾಖೆಗೆ ಸಹಾಯ ಮಾಡಿದ ಅಗ್ನಿಶಾಮಕ ಇಲಾಖೆಯ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತದೆ. ನೀರಿನ ಹರಿವಿನಿಂದ ಖುದಾ ಲಾಹೋರ್ ಸೇತುವೆಯ ಅಡಿಯಲ್ಲಿ ಸಿಲುಕಿಕೊಂಡಿದ್ದ ನಾಯಿಮರಿಯನ್ನು ರಕ್ಷಿಸಲಾಗಿದೆ" ಎಂದು ಬರೆದು ಪೋಸ್ಟ್​ ಹಂಚಿಕೊಂಡಿದ್ದಾರೆ. ಇಲಾಖೆಯು ತಮ್ಮ ಟ್ವೀಟ್‌ನಲ್ಲಿ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ಕೂಡ ಸೇರಿಸಿದೆ. ಜುಲೈ 10 ರಂದು ಪೋಸ್ಟ್ ಮಾಡಲಾದ ಈ ವಿಡಿಯೋ ಟ್ವಿಟರ್‌ನಲ್ಲಿ ಸುಮಾರು 98,000 ವೀಕ್ಷಣೆಗಳನ್ನು ಪಡೆದಿದೆ.

ಮಳೆ ಲೆಕ್ಕಿಸದೆ ಟಾರ್ಪಲ್​ ಮೂಲಕ ಮೆರವಣಿಗೆ : ಮತ್ತೊಂದೆಡೆ ಮಳೆಯ ನಡುವೆ ಆರ್ಪಲ್​ ಹಿಡಿದು ಮದುವೆ ಮೆರವಣಿಗೆ ಸಾಗಿರುವ ವಿಡಿಯೋ ವೈರಲ್​ ಆಗಿದೆ. ಉತ್ತರಾಖಂಡದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇದರ ನಡುವೆಯೇ ಹರಿದ್ವಾರದಲ್ಲಿ ಮಳೆ ಸುರಿಯುತ್ತಿದ್ದರೂ ಇದನ್ನು ಲೆಕ್ಕಿಸದೆ ಟಾರ್ಪಲ್​ ಹೊದ್ದು ಮೆರವಣಿಗೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮದುವೆ ಮೆರವಣಿಗೆ ವೈರಲ್​ ವಿಡಿಯೋ

ವಿಡಿಯೋದಲ್ಲಿ ದೊಡ್ಡ ಟಾರ್ಪಲಿನ ಕೆಳಗೆ ಜನರು ಸೇರಿ ಮೆರವಣಿಗೆಯಲ್ಲಿ ಸಾಗುತ್ತಿರುವುದು ಕಂಡು ಬಂದಿದೆ. ಮಳೆ ಬಂದರೂ ಚಿಂತೆ ಇಲ್ಲ ಎಂಬಂತೆ ಮೆರವಣಿಗೆ ಸಾಗಿರುವುದನ್ನು ನೋಡಿ ಜನ ಆಶ್ಚರ್ಯಗೊಂಡಿದ್ದಾರೆ. ಮೆರವಣಿಗೆಯಲ್ಲಿ ಜನರು ಉತ್ಸಾಹದಿಂದ ನೃತ್ಯ ಮಾಡುತ್ತಿರುವುದು ಗಮನ ಸೆಳೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋಗೆ ವಿಭಿನ್ನ ರೀತಿಯಲ್ಲಿ ಕಾಮೆಂಟ್​ಗಳನ್ನು ಮಾಡುತ್ತಿದ್ದಾರೆ. ಆದ್ರೆ ಈ ವಿಡಿಯೋ ಹರಿದ್ವಾರಕ್ಕೆ ಸೇರಿದ್ದು ಎಂದು ಹೇಳಲಾಗುತ್ತಿದೆ. ಇದನ್ನು ಖಚಿತಪಡಿಸಲಾಗಿಲ್ಲ.

ಇದನ್ನೂ ಓದಿ:ದಾಖಲೆಯ ಏರಿಕೆ ಕಂಡ ಯಮುನಾ ನದಿ ನೀರಿನ ಮಟ್ಟ; ದೆಹಲಿಯ ಹಲವು ಪ್ರದೇಶಗಳು ಮುಳುಗಡೆ- ವಿಡಿಯೋ

Last Updated :Jul 13, 2023, 1:51 PM IST

ABOUT THE AUTHOR

...view details