ಕರ್ನಾಟಕ

karnataka

ಜಮ್ಮು- ಕಾಶ್ಮೀರದ ವಿವಿಧೆಡೆ ಎನ್​ಐಎ ದಾಳಿ: ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರ ಬಂಧನ

By

Published : Aug 18, 2023, 9:44 AM IST

Updated : Aug 18, 2023, 11:18 AM IST

ಜಮ್ಮು ಮತ್ತು ಕಾಶ್ಮೀರದ ಬತಿಂಡಿ ಪ್ರದೇಶದಲ್ಲಿ ಎನ್​ಐಎ ದಾಳಿ ನಡೆಸಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಇಬ್ಬರನ್ನು ಬಂಧಿಸಲಾಗಿದೆ.

NIA conducts raids in Bathindi area of Jammu; Sopore Police nabs 2 overground workers of LeT
ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್​ಐಎ ದಾಳಿ: ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಇಬ್ಬರ ಬಂಧನ

ಜಮ್ಮು (ಜಮ್ಮು ಮತ್ತು ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಬತಿಂಡಿ ಪ್ರದೇಶದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರದ ಸೋಪೋರ್ ಪೊಲೀಸರು, ನಿಷೇಧಿತ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ಒಜಿಡಬ್ಲ್ಯೂಎಸ್ (ಓವರ್ ಗ್ರೌಂಡ್ ವರ್ಕರ್ಸ್) ಅನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಾರ್ಟ್ರಿಜ್​ಗಳು ಹಾಗೂ ಗ್ರೆನೇಡ್​ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈ ಕುರಿತಂತೆ ಎಫ್‌ಐಆರ್ ದಾಖಲಾಗಿದೆ. ಜೊತೆಗೆ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಸೋಪೋರ್ ಪೊಲೀಸರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾದ ಇಬ್ಬರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸೇನೆ ಮತ್ತು ಸೊಪೋರ್ ಪೊಲೀಸರು ಜಂಟಿ ದಾಳಿಯ ಸಮಯದಲ್ಲಿ ಟಾರ್ಜೊ ಸೊಪೋರ್‌ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಇಬ್ಬರು ಉಗ್ರಗಾಮಿ ಸಹಾಯಕರು ನಿಗ್ಲಿಸೋಪುರದಿಂದ ಲಯನ್ ಕಾಲೋನಿ ಕಡೆಗೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಂಚಾರ ಮಾಡುತ್ತಿದ್ದರು. ಆದರೆ, ಪೊಲೀಸರು ಅವರನ್ನು ನಿಲ್ಲಿಸಲು ಹೇಳಿದರು. ಆದರೆ, ಆರೋಪಿಗಳು ನಿಲ್ಲದೇ ಅಲ್ಲಿಂದ ಪರಾರಿಯಾಗಲು ಯತ್ನಿಸಿದರು. ಸೋಪೋರ್‌ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳು ವಶಕ್ಕೆ:ಪ್ರಾಥಮಿಕ ತನಿಖೆಯಲ್ಲಿ ಅವರನ್ನು ಮಂಜೂರ್ ಅಹ್ಮದ್ ಬಟ್ ಮತ್ತು ತನ್ವೀರ್ ಅಹ್ಮದ್ ಲೋನ್ ಎಂದು ಪೊಲೀಸರು ಗುರುತಿಸಿದ್ದಾರೆ. ಇವರಿಬ್ಬರೂ ತರ್ಜೊ ದರ್ನಾಂಬಲ್ ನಿವಾಸಿಗಳು. ಬಂಧಿತರಿಂದ ಕೆಲವು ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಉಗ್ರರು ಲಷ್ಕರ್ - ಎ - ತೊಯ್ಬಾ ಸಂಘಟನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಕಡೆಗಳಲ್ಲಿ ಎನ್​ಐಎ ದಾಳಿ:ಕಾಶ್ಮೀರ ಕಣಿವೆ ಹಾಗೂ ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು (ಶುಕ್ರವಾರ) ಬೆಳಿಗ್ಗೆ ದಾಳಿ ನಡೆಸಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ದಾಳಿಗಳನ್ನು ನಡೆಸಲಾಗಿದೆ. ಜಮ್ಮು ಸೇರಿದಂತೆ ಕಾಶ್ಮೀರ ಕಣಿವೆಯ ವಿವಿಧ ಜಿಲ್ಲೆಗಳಲ್ಲಿ ಪೊಲೀಸರು, ಸಿಆರ್‌ಪಿಎಫ್ ಸಹಕಾರದೊಂದಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡಗಳು ದಾಳಿ ನಡೆಸಿವೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೋಟಿಗಾಮ್ ಪ್ರದೇಶದ ಹಾಗೂ ಕಾಶ್ಮೀರ ಕಣಿವೆಯ ಇತರ ಜಿಲ್ಲೆಗಳಲ್ಲಿ ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ. ಈ ದಾಳಿ ಸಂಬಂಧಿಸಿದಂತೆ ಯಾವುದೇ ಅಧಿಕೃತ ಹೇಳಿಕೆ ಇನ್ನೂ ಹೊರಬಂದಿಲ್ಲ.

ಇದನ್ನೂ ಓದಿ:Himachal Rains: ಹಿಮಾಚಲ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರ; 3 ದಿನದಲ್ಲಿ 72 ಮಂದಿ ಸಾವು!

Last Updated : Aug 18, 2023, 11:18 AM IST

ABOUT THE AUTHOR

...view details