ಕರ್ನಾಟಕ

karnataka

ಕೊನೆ ಹಂತದ ಕಸರತ್ತು: ವಾರಣಾಸಿಯಲ್ಲಿ ಭರ್ಜರಿ ಮತಬೇಟೆ ನಡೆಸಿದ ನಮೋ

By

Published : Mar 5, 2022, 6:15 PM IST

PM Modi in Varanasi: ವಾರಣಾಸಿಯ ವಿವಿಧ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನಿನ್ನೆಯಿಂದಲೂ ಭರದ ಪ್ರಚಾರ ಕಾರ್ಯ ನಡೆಸುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ.

pm modi in varanasi
pm modi in varanasi

ವಾರಣಾಸಿ(ಉತ್ತರ ಪ್ರದೇಶ):ಉತ್ತರ ಪ್ರದೇಶದಲ್ಲಿ ಕೊನೆಯ ಹಂತದ ಮತದಾನ ಪ್ರಕ್ರಿಯೆ ಮಾರ್ಚ್​ 7ರಂದು ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಭರ್ಜರಿ ಮತಬೇಟೆ ನಡೆಸಿದರು.

ವಾರಣಾಸಿಯ ಖಜೂರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ನಮೋ, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ವಾರಣಾಸಿಯಲ್ಲಿ ಭರ್ಜರಿ ಮತಬೇಟೆ ನಡೆಸಿದ ನಮೋ

ಉತ್ತರ ಪ್ರದೇಶದಲ್ಲಿನ ಜನರು ಕುಟುಂಬ ರಾಜಕಾರಣವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಗೂಂಡಾಗಿರಿ, ಮಾಫಿಯಾ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮ ಉದ್ಯೋಗ ನೀಡುವ ಕುಟುಂಬವನ್ನ ಯುಪಿ ಜನರು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರ ರಚನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಎರಡು ವರ್ಷಗಳಿಂದ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಪಡಿತರ ವಿತರಣೆ ಮಾಡಲಾಗ್ತಿದೆ. ಇದರಿಂದ ಇಡೀ ವಿಶ್ವವೇ ಆಶ್ಚರ್ಯಕ್ಕೊಳಗಾಗಿದೆ. ಆದರೆ, ಬಡ ಜನರು, ದಲಿತರು, ಹಿಂದುಳಿದ ಕುಟುಂಬಗಳು ಸಂತೋಷವಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದರು.

ಇದನ್ನೂ ಓದಿರಿ:ಮಣಿಪುರದಲ್ಲಿ 2ನೇ ಹಂತದ ಮತದಾನದ ವೇಳೆ ಹಿಂಸಾಚಾರ: ಬಿಜೆಪಿ ಕಾರ್ಯಕರ್ತ ಸೇರಿ ಇಬ್ಬರು ಸಾವು

ದೇಶದಲ್ಲಿ ಸ್ವಚ್ಛ 'ಭಾರತ್ ಮಿಷನ್​' ಆರಂಭ ಮಾಡಿದ್ದೇವೆ. ಇದರ ಫಲವಾಗಿ 10 ಕೋಟಿಗೂ ಹೆಚ್ಚು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರಾಮದ ಬಡ, ದಲಿತ ಹಾಗೂ ಹಿಂದುಳಿದ ಕುಟುಂಬಗಳಿಗೆ ಹೆಚ್ಚಿನ ಪ್ರಯೋಜನವಾಗಿದೆ ಎಂದರು.

ಅರಮನೆಯಲ್ಲಿ ವಾಸ ಮಾಡುವ ಕುಟುಂಬಕ್ಕೆ ಗ್ರಾಮೀಣ ಭಾಗದ ಜನರ ಸಮಸ್ಯೆ ಗೊತ್ತಿರಲ್ಲ. ಮನೆಯಲ್ಲಿ ಶೌಚಾಲಯವಿಲ್ಲದಿದ್ದರೆ ತಾಯಿ(ಮಹಿಳೆ) ಎಷ್ಟೊಂದು ತೊಂದರೆ ಅನುಭವಿಸುತ್ತಾಳೆಂಬುದು ನನಗೆ ಗೊತ್ತಿದೆ ಎಂದು ಮೋದಿ ಹೇಳಿದರು.

ABOUT THE AUTHOR

...view details