ಕರ್ನಾಟಕ

karnataka

ಶ್ರೀನಗರದಲ್ಲಿ ಮೂವರು ಉಗ್ರರ ಹತ್ಯೆಗೈದ ಭದ್ರತಾ ಪಡೆ

By

Published : Nov 24, 2021, 5:46 PM IST

Police has neutralised three terrorists in Srinagar, say Jammu and Kashmir Police

ಜಮ್ಮು ಕಾಶ್ಮೀರ ಪೊಲೀಸ್‌ ಮತ್ತು ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಜಮ್ಮು-ಕಾಶ್ಮೀರ:ಕಣಿವೆ ನಾಡಿನಲ್ಲಿ ಉಗ್ರರನ್ನು ತಟಸ್ಥಗೊಳಿಸುವ ಭದ್ರತಾ ಪಡೆಗಳ ಕೆಲಸ ಮುಂದುವರೆದಿದೆ. ಶ್ರೀನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರದ ರಾಮ್‌ಭಾಗ್‌ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಇನ್ನೂ ಕೆಲವು ಉಗ್ರರು ಘಟನಾ ಪ್ರದೇಶದಲ್ಲಿ ಅಡಗಿರುವ ಶಂಕೆ ಇದೆ. ಭದ್ರತಾ ಪಡೆಗಳು ಕೂಂಬಿಂಗ್‌ ಮುಂದುವರೆಸಿವೆ.

ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ABOUT THE AUTHOR

...view details