ಚಂಡೀಗಢ:ಹಲವಾರು ಜನಪರ ಕಾರ್ಯಗಳನ್ನು ಜಾರಿ ಮಾಡುತ್ತಿರುವ ಪಂಜಾಬ್ ಸಿಎಂ ಭಗವಂತ್ ಮಾನ್ ಇದೀಗ ಮತ್ತೊಂದು ಅಂಥಹದ್ದೇ ಹೆಜ್ಜೆಯನ್ನಿಟ್ಟಿದ್ದಾರೆ. ತಮ್ಮ ಸಂಪುಟದ 14 ಸಚಿವರಿಗೆ ರಾಜ್ಯದ ಜಿಲ್ಲೆಗಳನ್ನು ಹಂಚಿಕೆ ಮಾಡಿ ಅಲ್ಲಿನ ಸಮಸ್ಯೆ ಮತ್ತು ನಿಂತಿರುವ ಕಾಮಗಾರಿಗಳಿಗೆ ವೇಗ ನೀಡುವ ಟಾಸ್ಕ್ ನೀಡಿದ್ದಾರೆ.
ಜಿಲ್ಲೆಯ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರು ನಿರಂತರವಾಗಿ ಅಲ್ಲಿಗೆ ಭೇಟಿ ನೀಡಬೇಕು. ಜನರ ಜೊತೆಗೂಡಿ ಅಲ್ಲಿನ ಸಮಸ್ಯೆಗಳನ್ನು ಆಲಿಸಬೇಕು. ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಸಾಧಿಸಿ ಸಭೆ ನಡೆಸುವ ಮೂಲಕ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸಿಎಂ ತಾಕೀತು ಮಾಡಿದ್ದಾರೆ. ವಿಶೇಷ ಅಂದರೆ ಯಾವೊಬ್ಬ ಸಚಿವರಿಗೆ ತವರು ಜಿಲ್ಲೆಯನ್ನು ಹಂಚಿಕೆ ಮಾಡಿಲ್ಲ.