ಹೈದರಾಬಾದ್ (ತೆಲಂಗಾಣ):ಹೈದರಾಬಾದ್ನ ಇಂದಿರಾ ಪಾರ್ಕ್ನಲ್ಲಿ ಆಯೋಜಿಸಲಾದ 'ರೈತ ಮಹಾ ಧರಣಾ'ದಲ್ಲಿ ಭಾಗಿಯಾಗಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್, 'ಕನಿಷ್ಠ ಬೆಂಬಲ ಬೆಲೆ ಕಾನೂನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನಾವು ಬರೆದಿರುವ ಪತ್ರಕ್ಕೆ ಇಲ್ಲಿಯವರೆಗೆ ಉತ್ತರ ನೀಡಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
'ಕನಿಷ್ಠ ಬೆಂಬಲ ಬೆಲೆ ವಿಚಾರವಾಗಿ ಕೇಂದ್ರ ಸರ್ಕಾರ ಮಾತನಾಡಲು ಸಿದ್ಧವಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಾವೂ ಪತ್ರ ಸಹ ಬರೆದಿದ್ದು, ಇಲ್ಲಿಯವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಎಂಎಸ್ಪಿ ವಿಚಾರವಾಗಿ ಕೇಂದ್ರ ಸರ್ಕಾರ ಕಾನೂನು ಜಾರಿಗೊಳಿಸುವುದರಿಂದ ದೇಶದ ಎಲ್ಲ ರೈತರಿಗೆ ಲಾಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ನಾವು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ' ಎಂದರು.