ನವದೆಹಲಿ:ಚುನಾವಣಾ ಪ್ರಚಾರದ ವೇಳೆ ದ್ವೇಷಮಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಬಳಿಕ ಇನ್ನಿಬ್ಬರು ಪ್ರಮುಖ ನಾಯಕರಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದೆ.
ಸುಲ್ತಾನ್ಪುರದಲ್ಲಿ ನಡೆದ ಪ್ರಚಾರದ ವೇಳೆ ಬಿಜೆಪಿ ನಾಯಕಿ ಹಾಗೂ ಪಿಲಿಭಿಟ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮನೇಕಾ ಗಾಂಧಿ ನೀತಿ ಸಂಹಿತೆ ಉಲ್ಲಂಘಿಸಿದ ಪರಿಣಾಮ 48 ಗಂಟೆಗಳ ಕಾಲ ಚುನಾವಣಾ ಪ್ರಚಾರವನ್ನು ಆಯೋಗ ನಿಷೇಧಿಸಿದೆ. ಈ ಆದೇಶ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಅನ್ವಯವಾಗಲಿದೆ.