ಕರ್ನಾಟಕ

karnataka

ಆಕ್ಸಿಜನ್​ ಕಂಟೇನರ್​ ಆಗಮಿಸಿದರೂ ಉಪಯೋಗಿಸಲಾಗ್ತಿಲ್ಲ.. ಇದೆಂಥಾ ವ್ಯವಸ್ಥೆ ಕಣ್ರೀ..

By

Published : May 24, 2021, 6:03 PM IST

Updated : May 24, 2021, 8:58 PM IST

ಅಧಿಕಾರಿಗಳ ಬೇಜವಾಬ್ದಾರಿತನದಿಂದ ಒಂದು ವಾರದಿಂದ ಆಕ್ಸಿಜನ್ ಖಾಲಿ ಮಾಡಲು ಎರಡು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ಇದರ ಮಧ್ಯೆ ಕಂಟೇನರ್ ಮಾತ್ರ ಅತ್ತಿಂದಿತ್ತ ಸುತ್ತಾಡುತ್ತಿದೆ. ಒಂದು ಮಾಹಿತಿ ‌ಪ್ರಕಾರ ಆಕ್ಸಿಜನ್ ವಾಹನ ಹುಬ್ಬಳ್ಳಿ ‌ಕಿಮ್ಸ್ ಹಾಗೂ ಬೆಳಗಾವಿ ಬಿಮ್ಸ್ ಆಸ್ಪತ್ರೆ ಒಳಗೆ ಹೋಗಲು ಸ್ಥಳಾವಕಾಶದ ಕೊರತೆ ಕಾರಣ ಎನ್ನಲಾಗಿದೆ..

ಬಳಕೆಯಾಗದ ಆಕ್ಸಿಜನ್​

ಹುಬ್ಬಳ್ಳಿ :ಕೊರೊನಾ ಮಹಾಮಾರಿಗೆ ದೇಶವೇ ತಲ್ಲಣಗೊಂಡಿದೆ. ಆಕ್ಸಿಜನ್, ಬೆಡ್ ಸಿಗದೆ ರೋಗಿಗಳು ಪ್ರಾಣ ಬಿಡುತ್ತಿದ್ದಾರೆ. ಆದರೆ, ಧಾರವಾಡ ಜಿಲ್ಲಾಡಳಿತದ ಬೇಜವಾಬ್ದಾರಿಯಿಂದ ಆಕ್ಸಿಜನ್ ಸರಬರಾಜು ಮಾಡಲು ಬಂದ ಕಂಟೇನರ್ ವಾರದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಸುತ್ತುತ್ತಿದೆ.

ಒಂದು ಕಡೆ ಆಕ್ಸಿಜನ್ ಇಲ್ಲದೆ ರೋಗಿಗಳು ಪರದಾಡುತ್ತಿದ್ದರೆ, ಇನ್ನೊಂದು ಕಡೆ ಬಂದ ಆಕ್ಸಿಜನ್​ನ ಉಪಯೋಗ ಮಾಡಕೊಳ್ಳದೆ ಅಧಿಕಾರಿಗಳು ನಿಷ್ಕಾಳಜಿ ತೋರಿಸಿದ್ದಾರೆ. ಒಂದು ವಾರದೆ ಹಿಂದೆ ಮಧ್ಯಪ್ರದೇಶದಿಂದ ಹುಬ್ಬಳ್ಳಿಗೆ ಆಕ್ಸಿಜನ್ ತುಂಬಿದ ಕಂಟೇನರ್ ಬಂದಿದೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೂರು ದಿನಗಳ ಕಾಲ ನಿಂತರೂ ಆಕ್ಸಿಜನ್ ಖಾಲಿ ಮಾಡಲೇ ಇಲ್ಲ‌. ಈ ವಾಹನ ‌ಇಲ್ಲಿ ಏತಕ್ಕೆ ಬಂದಿದೆ ಎಂದು ಯಾರು ಕೇಳಿಲ್ಲ. ಮೂರು ದಿನಗಳ ನಂತರ ಬೆಳಗಾವಿಗೆ ಆಕ್ಸಿಜನ್ ಕಂಟೇನರ್ ಹೋಗಿದೆ.

ಆಕ್ಸಿಜನ್​ ಕಂಟೇನರ್​ ಆಗಮಿಸಿದರೂ ಉಪಯೋಗಿಸಲಾಗ್ತಿಲ್ಲ

ಅಲ್ಲಿಯೂ ಎರಡೂ ದಿನ ನಿಂತು ಮರಳಿ ಧಾರವಾಡದ ಬೇಲೂರ ಕೈಗಾರಿಕಾ ಪ್ರದೇಶದಲ್ಲಿ ಎರಡು ದಿನ ವಾಹನ ನಿಂತಿದೆ. ಅಲ್ಲಿಯೂ ಆಕ್ಸಿಜನ್ ಡಂಪ್ ಮಾಡಿಲ್ಲ. ಆಕ್ಸಿಜನ್ ಖಾಲಿ ಆಗದ ಕಾರಣ ಈಗ ಧಾರವಾಡದ ನವಲೂರ ಗ್ರಾಮಕ್ಕೆ ಬಂದು ವಾಹನ ನಿಂತಿದೆ.

ಅಧಿಕಾರಿಗಳ ಬೇಜವಾಬ್ದಾರಿತನದಿಂದ ಒಂದು ವಾರದಿಂದ ಆಕ್ಸಿಜನ್ ಖಾಲಿ ಮಾಡಲು ಎರಡು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ. ಇದರ ಮಧ್ಯೆ ಕಂಟೇನರ್ ಮಾತ್ರ ಅತ್ತಿಂದಿತ್ತ ಸುತ್ತಾಡುತ್ತಿದೆ.

ಒಂದು ಮಾಹಿತಿ ‌ಪ್ರಕಾರ ಆಕ್ಸಿಜನ್ ವಾಹನ ಹುಬ್ಬಳ್ಳಿ ‌ಕಿಮ್ಸ್ ಹಾಗೂ ಬೆಳಗಾವಿ ಬಿಮ್ಸ್ ಆಸ್ಪತ್ರೆ ಒಳಗೆ ಹೋಗಲು ಸ್ಥಳಾವಕಾಶದ ಕೊರತೆ ಕಾರಣ ಎನ್ನಲಾಗಿದೆ.

ಇದಕ್ಕೆ ಪರ್ಯಾಯವಾಗಿ ಬೇಲೂರು ಕೈಗಾರಿಕಾ ಪ್ರದೇಶದಲ್ಲಿಯೂ ಆಕ್ಸಿಜನ್ ತೆರವುಗೊಳಿಸಲು ಸಾಧ್ಯವಾಗಿಲ್ಲ ಎನ್ನಲಾಗುತ್ತಿದ್ದು, ಇದು ಎರಡು ಜಿಲ್ಲಾಡಳಿತಗಳ ಅಸಮರ್ಥ ಕಾರ್ಯವೈಖರಿಗೆ ಹಿಡಿದ ಕೈನ್ನಡಿಯಾಗಿದೆ.

Last Updated :May 24, 2021, 8:58 PM IST

ABOUT THE AUTHOR

...view details