ಸೂರತ್:ಇಲ್ಲಿನ ಸೂರತ್ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ವಾರಕ್ಕೆ ಎರಡು ಬಾರಿ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ, ಕೊರೊನಾ ಅವಧಿ ಪರಿಗಣಿಸಿ ಸೂರತ್ನಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಟೆಸ್ಟ್ ಅನ್ನು ಒಡಿಶಾ ಸರ್ಕಾರ ಕಡ್ಡಾಯಗೊಳಿಸಿದೆ. ಇದರ ಪರಿಣಾಮವಾಗಿ ಸೋಮವಾರ ಸೂರತ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ 170 ಪ್ರಯಾಣಿಕರಲ್ಲಿ 119 ಜನರಿಗೆ ಭುವನೇಶ್ವರ ವಿಮಾನ ಹತ್ತಲು ಸಾಧ್ಯವಾಗಲಿಲ್ಲ.
ವಿಮಾನ ಏರಿದ ಈ ಎಲ್ಲಾ ಪ್ರಯಾಣಿಕರು ಆರ್ಟಿಪಿಸಿಆರ್ ಪರೀಕ್ಷೆಗೆ ಒಳಗಾಗಲಿಲ್ಲ. ಇದರಿಂದಾಗಿ ವಿಮಾನ ನಿಲ್ದಾಣ ಪ್ರಾಧಿಕಾರವು ಯಾರಿಗೂ ವಿಮಾನ ಹತ್ತಲು ಅವಕಾಶ ನೀಡಲಿಲ್ಲ.
ಪ್ರಯಾಣಿಕರು ವಿಮಾನ ಹತ್ತಲು ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ಬಂದರು. ಆದರೆ, ಆರ್ಟಿಪಿಸಿಆರ್ ಪರೀಕ್ಷೆ ಪ್ರಯಾಣ ಕಡ್ಡಾಯವಾಗಿದೆ. ಪರೀಕ್ಷೆ ವರದಿ ಇಲ್ಲದಿದ್ದರೇ ಪ್ರಯಾಣಿಸಲು ಅವಕಾಶವಿರುವುದಿಲ್ಲ ಎಂದು ನಿಲ್ದಾಣದ ಸಿಬ್ಬಂದಿ ತಡೆದರು.