ಕರ್ನಾಟಕ

karnataka

GST ನಷ್ಟ ಪರಿಹಾರ: 10ನೇ ಕಂತಿನಡಿ ರಾಜ್ಯಗಳಿಗೆ 6,000 ಕೋಟಿ ರೂ. ಬಿಡುಗಡೆ

By

Published : Jan 4, 2021, 9:34 PM IST

ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹಣದಲ್ಲಿ 23 ರಾಜ್ಯಗಳಿಗೆ 5,516.60 ಕೋಟಿ ರೂ. ಹಾಗೂ 483.40 ಕೋಟಿ ರೂ. ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ (ದೆಹಲಿ, ಜಮ್ಮು & ಕಾಶ್ಮೀರ ಮತ್ತು ಪುದುಚೇರಿ) ಬಿಡುಗಡೆ ಮಾಡಲಾಗಿದೆ ಎಂದು ಜಿಎಸ್​ಟಿ ಮಂಡಳಿ ತಿಳಿಸಿದೆ.

GST
ಜಿಎಸ್​ಟಿ

ನವದೆಹಲಿ:ಜಿಎಸ್‌ಟಿ ನಷ್ಟ ಪರಿಹಾರದ ಕೊರತೆ ನೀಗಿಸಲು ಹಣಕಾಸು ಸಚಿವಾಲಯವು 10ನೇ ಕಂತಿನಡಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 6,000 ಕೋಟಿ ರೂ. ಬಿಡುಗಡೆ ಮಾಡಿದೆ.

ವಿತ್ತ ಸಚಿವಾಲಯ ಬಿಡುಗಡೆ ಮಾಡಿದ ಹಣದಲ್ಲಿ 23 ರಾಜ್ಯಗಳಿಗೆ 5,516.60 ಕೋಟಿ ರೂ. ಹಾಗೂ 483.40 ಕೋಟಿ ರೂ. ಮೂರು ಕೇಂದ್ರಾಡಳಿತ ಪ್ರದೇಶಗಳಿಗೆ (ದೆಹಲಿ, ಜಮ್ಮು & ಕಾಶ್ಮೀರ ಮತ್ತು ಪುದುಚೇರಿ) ಬಿಡುಗಡೆ ಮಾಡಲಾಗಿದೆ ಎಂದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಉಳಿದ ಐದು ರಾಜ್ಯಗಳಾದ ಅರುಣಾಚಲ ಪ್ರದೇಶ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ ಜಿಎಸ್​​ಟಿ ಅನುಷ್ಠಾನದಿಂದ ಆದಾಯದಲ್ಲಿ ಅಂತರ ಇಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನಾಗರಿಕ ಸೇವೆಗಳಿಗೆ ಹೆಚ್ಚುವರಿ 89 ಅಭ್ಯರ್ಥಿಗಳು UPSCಯಿಂದ ಶಿಫಾರಸು!

ರಾಜ್ಯಗಳಿಗೆ ನೀಡಲಾದ 1,06,830 ಕೋಟಿ ರೂ. ಪೈಕಿ ಈವರೆಗೆ ಒಟ್ಟು 42,000 ಕೋಟಿ ರೂ. ಒದಗಿಸಲಾಗಿದೆ. ಜಿಎಸ್​ಟಿ ಅನುಷ್ಠಾನದ ಕಾರಣದಿಂದ ಉಂಟಾಗುವ ನಷ್ಟದ ಕೊರತೆ ಆದಾಯದಲ್ಲಿ ಅಂದಾಜು 1.10 ಲಕ್ಷ ಕೋಟಿ ರೂ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪರವಾಗಿ ಕೇಂದ್ರ ಸರ್ಕಾರ ವಿಶೇಷ ವಿಂಡೋ ಮೂಲಕ ಸಾಲ ಪಡೆಯುತ್ತದೆ.

ಹತ್ತು ಹಂತಗಳಲ್ಲಿ ಸಾಲ ಮಾಡಿದ ಕೇಂದ್ರ ಸರ್ಕಾರವು ಅಕ್ಟೋಬರ್ 23, ನವೆಂಬರ್ 2, ನವೆಂಬರ್ 9, ನವೆಂಬರ್ 23, ಡಿಸೆಂಬರ್ 1, ಡಿಸೆಂಬರ್ 7, ಡಿಸೆಂಬರ್ 14, ಡಿಸೆಂಬರ್ 21, ಡಿಸೆಂಬರ್ 28 ಮತ್ತು ಜನವರಿ 1ರಂದು ರಾಜ್ಯಗಳಿಗೆ ಹಣ ಬಿಡುಗಡೆ ಮಾಡಿದೆ. 6,000 ಕೋಟಿ ರೂ. ಮೊತ್ತವನ್ನು ಈ ವಾರ ಶೇ. 4.1526 ರ ಬಡ್ಡಿ ದರದಲ್ಲಿ ಎರವಲು ಪಡೆಯಲಾಗಿದೆ. ಇಲ್ಲಿಯವರೆಗೆ ಸರ್ಕಾರವು ವಿಶೇಷ ಸಾಲ ಪಡೆಯುವ ವಿಂಡೋ ಮೂಲಕ ಸರಾಸರಿ 4.6892ರಷ್ಟು ಬಡ್ಡಿ ದರದಲ್ಲಿ 60,000 ಕೋಟಿ ರೂ. ತೆಗೆದುಕೊಂಡಿದೆ.

ABOUT THE AUTHOR

...view details