ಕರ್ನಾಟಕ

karnataka

ವಿಜಯನಗರ: ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ, ಚಿನ್ನಾಭರಣ, ನಗದು ಪತ್ತೆ

By

Published : Jun 17, 2022, 2:32 PM IST

Updated : Jun 17, 2022, 2:51 PM IST

ACB raid
ACB raid

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಸಣ್ಣ ನೀರಾವರಿ ಇಲಾಖೆ ಸಹಾಯಕ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರೋ ಪರಮೇಶ್ವರಪ್ಪ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಚಿನ್ನಾಭರಣ, ಬೆಳ್ಳಿ ಹಾಗೂ ನಗದು ಪತ್ತೆಯಾಗಿದೆ..

ವಿಜಯನಗರ: ಜಿಲ್ಲೆಯ ಹೂವಿನಹಡಗಲಿಯ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಪರಮೇಶ್ವರಪ್ಪ ಮನೆ, ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರಂತರ ಐದು ಗಂಟೆಯಿಂದಲೂ ಎಸಿಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ದಾಳಿ ವೇಳೆ ಚಿನ್ನಾಭರಣ, ಬೆಳ್ಳಿ ನಾಣ್ಯ ಹಾಗೂ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿದೆ.

ಅಕ್ರಮ ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಪರಮೇಶ್ವರಪ್ಪ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಕಚೇರಿ, ಚಿತ್ರದುರ್ಗ ಸ್ವಂತ ನಿವಾಸದ ಮೇಲೆ ಎಸಿಬಿ ಮೂರು ತಂಡದಿಂದ 18ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪರಮೇಶ್ವರಪ್ಪ ಪತ್ನಿ ಬಳಿ ಇರುವ ಎರಡು ಮಾಂಗಲ್ಯ ಸರ, ನೆಕ್ಲೇಸ್, ಉಂಗುರ, ಬಂಗಾರದ ಬಳೆಗಳು, ಬೆಳ್ಳಿಯ ಆಭರಣಗಳ ಬಗ್ಗೆ ಎಸಿಬಿ ಮಾಹಿತಿ ಪಡೆಯುತ್ತಿದೆ. ಜೊತೆಗೆ ಕೂಡ್ಲಿಗಿ ಪಟ್ಟಣ ಕಚೇರಿ ಮೇಲೆ ಸಹ ದಾಳಿ ಮುಂದುವರೆದಿದೆ.

ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ

ಇದನ್ನೂ ಓದಿ:ಭ್ರಷ್ಟರ ಮೇಲೆ ACB ದಾಳಿ: ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ

Last Updated :Jun 17, 2022, 2:51 PM IST

ABOUT THE AUTHOR

...view details