ಕರ್ನಾಟಕ

karnataka

ಲಾರಿ ಚಾಲಕನಿಗೆ 11 ತಿಂಗಳು ಜೈಲು ಶಿಕ್ಷೆ, 7,500 ರೂ. ದಂಡ ವಿಧಿಸಿದ ಕೋರ್ಟ್!

By

Published : Feb 16, 2021, 12:58 PM IST

2013ರ ಡಿಸೆಂಬರ್ 6ರಂದು ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ರುದ್ರಪ್ಪನಿಗೆ 11 ತಿಂಗಳು ಜೈಲು ಶಿಕ್ಷೆ ಹಾಗೂ 7,500 ದಂಡವನ್ನು ವಿಧಿಸಿ ಹೊಸಪೇಟೆ ಜೆಎಂಎಫ್​​ಸಿ ನ್ಯಾಯಾಲಯ ತೀರ್ಪು ನೀಡಿದೆ.

Hospet JMFC Court Setenced  11 months Imprisonment for Lorry driver
ಲಾರಿ ಚಾಲಕನಿಗೆ 11 ತಿಂಗಳು ಜೈಲು ಶಿಕ್ಷೆ, 7,500 ರೂ. ದಂಡ ವಿಧಿಸಿದ ಕೋರ್ಟ್!

ಹೊಸಪೇಟೆ (ವಿಜಯನಗರ):ಲಾರಿ ಅಪಘಾತ ಮಾಡಿ ಮೂರು ಜನರ ಸಾವಿಗೆ ಕಾರಣವಾದ ಚಾಲಕನಿಗೆ 11 ತಿಂಗಳು ಜೈಲು ಶಿಕ್ಷೆ ಹಾಗೂ 7,500 ದಂಡವನ್ನು ವಿಧಿಸಿ ನಗರದ ಜೆಎಂಎಫ್​​ಸಿ ನ್ಯಾಯಾಲಯ ತೀರ್ಪು ನೀಡಿದೆ.

ಲಾರಿ ಚಾಲಕನಿಗೆ 11 ತಿಂಗಳು ಜೈಲು ಶಿಕ್ಷೆ, 7,500 ರೂ. ದಂಡ ವಿಧಿಸಿದ ಕೋರ್ಟ್!

2013ರ ಡಿಸೆಂಬರ್ 6ರಂದು ಹೊಸಪೇಟೆಯ ಬಳ್ಳಾರಿ ರಸ್ತೆಯಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕ ರುದ್ರಪ್ಪನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹೊಸಪೇಟೆ ಸಂಚಾರಿ ಪೊಲೀಸರು ತನಿಖೆ ನಡೆಸಿ, ಪಿಎಸ್​ಐ ಸಲೀಂ ಪಾಷಾ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸೋಮವಾರ ಈ ಪ್ರಕರಣದ ವಿಚಾರಣೆ ನಡೆಸಿದ ಜೆಎಂಎಫ್​​ಸಿ ನ್ಯಾಯಾಲಯದ ನ್ಯಾ. ತೃಪ್ತಿ ಧರಣಿ, ಚಾಲಕನಿಗೆ 11 ತಿಂಗಳು ಜೈಲು ಶಿಕ್ಷೆ ಹಾಗೂ 7,500 ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಅಪರಿಚಿತ ವಾಹನ ಡಿಕ್ಕಿ: ಬೈಕ್​ ಸವಾರ ಸಾವು

ಕೂಡ್ಲಿಗಿ ತಾಲೂಕಿನ ಕೆರೆಕಾವಲ ಹಟ್ಟಿ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಮಾರೇಶ್ ( 18) ಮೃತ ಯುವಕ. ಮಾರೇಶ್ ಕೆರೆಕಾವಲ ಹಟ್ಟಿಯಿಂದ ಕೂಡ್ಲಿಗಿ ಕಡೆ ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ.

ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಫೆಬ್ರವರಿ 20ರಂದು ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಹೋಬಳಿಯ ಚಿಲಕನಹಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮಲಾಪುರದಲ್ಲಿ ಗ್ರಾಮವಾಸ್ತವ್ಯ ಮಾಡಲಿದ್ದಾರೆ.

ABOUT THE AUTHOR

...view details