ಕರ್ನಾಟಕ

karnataka

ಟಿಪ್ಪು ಜಯಂತಿ ಮೋಜಿನಲ್ಲಿ ಚಾಮರಾಜಪೇಟೆಯಲ್ಲಿ‌ ಕಳೆದು ಹೋಗಬೇಡಿ, ಇತಿಹಾಸದ ಪುಸ್ತಕ ಓದಿ: ಸಿದ್ದು ಕಾಲೆಳೆದ ಬಿಜೆಪಿ

By

Published : Nov 11, 2021, 3:17 PM IST

ವೀರವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ? ಸಿದ್ದರಾಮಯ್ಯನವರೇ, ಟಿಪ್ಪು ಜಯಂತಿಯ ಮೋಜಿನಲ್ಲಿ ಚಾಮರಾಜಪೇಟೆಯಲ್ಲಿ‌ ಕಳೆದು ಹೋಗಬೇಡಿ. ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ ಎಂದು ಸಿದ್ದರಾಮಯ್ಯನವವರ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.

ಸಿದ್ದು ಕಾಲೆಳೆದ ಬಿಜೆಪಿ
ಸಿದ್ದು ಕಾಲೆಳೆದ ಬಿಜೆಪಿ

ಬೆಂಗಳೂರು:ಹೈದರಾಲಿ ಮತ್ತು ಟಿಪ್ಪು ಅಪ್ರತಿಮ ದೇಶಪ್ರೇಮಿಗಳು ಎನ್ನುವ ಸಿದ್ದರಾಮಯ್ಯನವರೇ, ವೀರವನಿತೆ ಓಬವ್ವ ಹಾಗೂ ಚಿತ್ರದುರ್ಗದ ಮದಕರಿ ನಾಯಕರಿಗೆ ಯಾವ ಪಟ್ಟಕಟ್ಟುತ್ತೀರಿ? ಟಿಪ್ಪುವನ್ನು ವೈಭವೀಕರಿಸುವ ನಿಮಗೆ ಓಬವ್ವ ಹಾಗೂ ಮದಕರಿ ನಾಯಕನ ಶೌರ್ಯ ಕಾಣಿಸುವುದಿಲ್ಲವೇ? ಎಂದು ಪ್ರತಿಪಕ್ಷ ನಾಯಕನನ್ನು ರಾಜ್ಯ ಬಿಜೆಪಿ (BJP Karnataka) ಪ್ರಶ್ನಿಸಿದೆ.

"ಉಳುವವನೇ ಭೂಮಿಯ ಒಡೆಯ ಕಾನೂನನ್ನು ಮೊದಲಿಗೆ ಜಾರಿಗೆ ತಂದಿದ್ದು ಹೈದರಾಲಿ. ಕನ್ನಂಬಾಡಿ ಕಟ್ಟೆಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್. ಹೀಗೆ ನಾಡಿಗೆ ಟಿಪ್ಪು ಮತ್ತು ಹೈದರಾಲಿ ಕೊಡುಗೆ ಅಪಾರವಾದುದ್ದು" ಎಂಬ ಸಿದ್ದರಾಮಯ್ಯ (Siddaramaiah) ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಬಿಜೆಪಿ ತನ್ನ ಅಧಿಕೃತ ಟ್ವಟರ್​ ಖಾತೆಯಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದೆ.

ರಾಜ್ಯ ಬಿಜೆಪಿ ಟ್ವೀಟ್​

ನೀವು ವೈಭವೀಕರಿಸುವ ಹೈದರಾಲಿ ಹಾಗೂ ಟಿಪ್ಪುವಿನ ಹೇಡಿತನ ಹಾಗೂ ಮೋಸವನ್ನು ಒನಕೆ ಓಬವ್ವ ಆ ಕಾಲದಲ್ಲೇ ಬಯಲು ಮಾಡಿದ್ದಳು. ಚಿತ್ರದುರ್ಗದ ಕೋಟೆ ರಕ್ಷಣೆಗಾಗಿ ಏಕಾಂಗಿಯಾಗಿ ಒನಕೆ ಹಿಡಿದು ಹೋರಾಡಿದ ಈ ಹೆಣ್ಣುಮಗಳ ಶೌರ್ಯಕ್ಕೂ, ಹೈದರಾಲಿ, ಟಿಪ್ಪುವಿನ‌ ಕ್ರೌರ್ಯಕ್ಕೂ ಹೋಲಿಕೆ ಸಾಧ್ಯವೇ? ಎಂದು ಟ್ವೀಟ್ ಮೂಲಕ ಬಿಜೆಪಿ ಸಿದ್ದರಾಮಯ್ಯರ ಕಾಲೆಳೆದಿದೆ.

ಇದನ್ನೂ ಓದಿ:Tippu Jayanti: ಟಿಪ್ಪು ಸೆಕ್ಯುಲರ್‌ ಕಿಂಗ್‌- ಯಾವತ್ತೂ ಮತಾಂಧ ಆಗಿರಲಿಲ್ಲ: ಸಿದ್ದರಾಮಯ್ಯ

ನಿಮಗೆ ಓಲೈಕೆ ರಾಜಕಾರಣ ಮಾತ್ರ ಮುಖ್ಯ. ಹೀಗಾಗಿ ವೀರಾಗ್ರಣಿ ಒನಕೆ ಓಬವ್ವ (Onake Obavva Jayanthi) ಹಾಗೂ ಮದಕರಿ ನಾಯಕರ ಜಯಂತಿಯ ಬದಲು ಟಿಪ್ಪು ಜಯಂತಿ (Tippu Jayanti) ಆಚರಿಸಿದಿರಿ. ನೀವೊಬ್ಬ ಹಿಂದು ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಟಿಪ್ಪು ಒಬ್ಬ ವೀರ... ! ಇದು ಸಿದ್ದರಾಮಯ್ಯನವರ ವ್ಯಾಖ್ಯಾನ. ಈ ರಣ ಹೇಡಿಯನ್ನು ಚಿತ್ರದುರ್ಗದ ಮದಕರಿ ನಾಯಕ ಹೆಡೆಮುರಿ‌ ಕಟ್ಟಿದ್ದ ಇತಿಹಾಸ ನಿಮಗೆ ಗೊತ್ತೇ? ಸಿದ್ದರಾಮಯ್ಯ ಅವರೇ, ಚರಿತ್ರೆಯ ಆಯ್ದ ಭಾಗವನ್ನು ಮಾತ್ರ ಓದುವ ಹವ್ಯಾಸ ಒಳ್ಳೆಯದಲ್ಲ ಎಂದು ಟೀಕಿಸಿದೆ.

ರಾಜ್ಯ ಬಿಜೆಪಿ ಟ್ವೀಟ್​

ವೀರವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ? ಸಿದ್ದರಾಮಯ್ಯನವರೇ, ಟಿಪ್ಪು ಜಯಂತಿಯ ಮೋಜಿನಲ್ಲಿ ಚಾಮರಾಜಪೇಟೆಯಲ್ಲಿ‌ ಕಳೆದು ಹೋಗಬೇಡಿ. ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ. ಮೈಸೂರು ರಾಜರು, ಮಯೂರ, ಗಂಗರಸರು, ರಾಷ್ಟ್ರಕೂಟರು, ಹೊಯ್ಸಳರು ಮಠಮಂದಿರ ಕಟ್ಟಿ ನಾಡನ್ನು ಸುಭೀಕ್ಷವಾಗಿಟ್ಟಿದ್ದನ್ನು ಏಕೆ ಮರೆ ಮಾಚುವಿರಿ ಸಿದ್ದರಾಮಯ್ಯ? ಟಿಪ್ಪು ಜಯಂತಿಯನ್ನು ಜನ ತಿರಸ್ಕರಿಸಿದರೂ, ಮುಸ್ಲಿಂ ಸಮುದಾಯವೇ ಟಿಪ್ಪು ಜಯಂತಿಯ ಅಗತ್ಯವಿಲ್ಲವೆಂದರೂ ಟಿಪ್ಪುವನ್ನು ಆರಾಧಿಸುತ್ತಿರುವ ಮರ್ಮವೇನು? ಎಂದು ಸರಣಿ ಟ್ವೀಟ್ ಮೂಲಕ ಪ್ರಶ್ನಿಸಿದೆ.

ABOUT THE AUTHOR

...view details