ಕರ್ನಾಟಕ

karnataka

ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್​ ಮಾಡದ ಹಗರಣವಿಲ್ಲ: ಸಿ.ಟಿ.ರವಿ

By

Published : Jun 13, 2022, 5:22 PM IST

ಕಾಂಗ್ರೆಸ್​ ನಾಯಕರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಗಳ ಸುರಿಮಳೆ ಸುರಿಸಿದ್ದಾರೆ.

ಕಾಂಗ್ರೆಸ್​ ವಿರುದ್ಧ ಬಿಜೆಪಿ ಶಾಸಕ ಸಿ ಟಿ ರವಿ ಟೀಕೆ
ಕಾಂಗ್ರೆಸ್​ ವಿರುದ್ಧ ಬಿಜೆಪಿ ಶಾಸಕ ಸಿ ಟಿ ರವಿ ಟೀಕೆ

ಬೆಂಗಳೂರು:ಆಡು ಮುಟ್ಟದ ಸೊಪ್ಪಿಲ್ಲ, ಕಾಂಗ್ರೆಸ್ ನಡೆಸದಿರುವ ಭ್ರಷ್ಟಾಚಾರವಿಲ್ಲ. ಮೇವು ತಿಂದವರು ಜೈಲಿನಲ್ಲಿದ್ದಾರೆ. ಈಗ ಪೇಪರ್ ತಿಂದವರು ಜೈಲಿಗೆ ಹೋಗುತ್ತಾರೆ ಎಂದು ಸಿ.ಟಿ.ರವಿ ಭವಿಷ್ಯ ನುಡಿದರು.

ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡುತ್ತಾ, ಕಾಂಗ್ರೆಸ್​ನವರು ಸಂವಿಧಾನಕ್ಕಿಂತ ಮೇಲ್ಪಟ್ಟವರಾ? ಕಾಂಗ್ರೆಸ್​ನವರಿಗೆ ಭಯ ಯಾಕೆ? ಹಗರಣಗಳ ಸರದಾರ ಕಾಂಗ್ರೆಸ್ ಪಕ್ಷ. ಕಾಲಿನಿಂದ ತಲೆಯವರೆಗೂ ಹಗರಣ ಹೊದ್ದುಕೊಂಡಿರುವುದು ಕಾಂಗ್ರೆಸ್ ಎಂದು ಟೀಕಿಸಿದರು.

ಇಂಡಿಯನ್ ಆಯಿಲ್ ಸ್ಕ್ಯಾಮ್, 2ಜಿ ಸ್ಪೆಕ್ಟ್ರಂ, ಆಗಸ್ಟಾ ವೆಸ್ಟ್​ಲ್ಯಾಂಡ್, ಕೆಜಿ ಬೇಸಿನ್ ಹಗರಣವನ್ನು ಕಾಂಗ್ರೆಸ್​ ​ಮಾಡಿದೆ. ಭ್ರಷ್ಟಾಚಾರ ನಡೆಸಿದವರಿಗೆ ಭ್ರಷ್ಟಾಚಾರಿಗಳೇ ಬೆಂಬಲ ಕೊಡುತ್ತಿದ್ದಾರೆ. ಹಾಗಲಕಾಯಿಗೆ ಬೇವಿನ ಕಾಯಿ ಸಾಕ್ಷಿ ಎಂಬಂತೆ ಕಾಂಗ್ರೆಸ್​ನವರು ಬೀದಿಗಿಳಿದಿದ್ದಾರೆ. ಗಾಂಧಿ ಕುಟುಂಬದ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದೆ. ದೇಶಕ್ಕಿಂತ ನಾವು ದೊಡ್ಡವರು ಅಂತಾ ಅವರು ತಿಳಿದುಕೊಂಡಿರುವುದು ದುರಂತ ಎಂದರು.

ಆಲೂಗಡ್ಡೆಯಲ್ಲಿ ಚಿನ್ನ ಬರುತ್ತಾ?:ಆಲೂಗಡ್ಡೆಯಲ್ಲಿ ಚಿನ್ನ ತೆಗೆಯೋದು ಹೇಗೆ ಅಂತ ರಾಹುಲ್ ಗಾಂಧಿ ಹೇಳಿದ್ದರು. 50 ಲಕ್ಷ ಹಾಕಿ ಸಾವಿರಾರು ಕೋಟಿ ಹಣ ಪಡೆಯೋದು ಎಂಬ ಬಗ್ಗೆ ಪಾಠ ಮಾಡಿದ್ದರು. ಇನ್ನೊಬ್ಬರು ಕೃಷಿ ಮಾಡಿ ಆಸ್ತಿ ಮಾಡಿದವರು. ಇದೀಗ ಅವರು ಬೇಲ್ ಮೇಲೆ ಹೊರಗಿದ್ದಾರೆ. ದಿನವೂ ಕೃಷಿ ಮಾಡುವ ರೈತರು ಕಷ್ಟದಲ್ಲಿದ್ದಾಗ ಇವರು ಮಾತ್ರ ಕೃಷಿಯಲ್ಲಿ ಸಾವಿರಾರು ಕೋಟಿ ಹಣ ಗಳಿಸಿದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ದೆಹಲಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಂಡು ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಓಡಿ ಹೋಗಿದ್ದಾರೆ. ಮುಖಂಡನೇ ಶಿಖಂಡಿಯಾದರೆ ಹಿಂಬಾಲಕರ ಗತಿ ಏನಯ್ಯ ಎಂಬಂತೆ ಅವರ ನಾಯಕರು ಈ ರೀತಿ ಓಡಿ ಹೋದರೆ ಅವರ ಹಿಂಬಾಲಕರ ಕಥೆ ಏನು ಎಂದು ಸಿ.ಟಿ.ರವಿ ವ್ಯಂಗ್ಯವಾಡಿದರು.

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಅನಿಲ್ ಬೆನಕೆ ವಿರುದ್ಧ ಪ್ರಕರಣ ದಾಖಲು

ABOUT THE AUTHOR

...view details