ಕರ್ನಾಟಕ

karnataka

ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದರ ಮೇಲೆ ದಾಳಿ : ಐವರ ಬಂಧನ!

By

Published : Jan 28, 2022, 6:40 PM IST

ಈ ಫೇಕ್ ದಾಳಿ ಕುರಿತು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸ್ ಸಿಬ್ಬಂದಿ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.7 ಲಕ್ಷ ರೂಪಾಯಿ ನಗದು, ಕಾರು, ಏರ್​​​ಗನ್, ನಕಲಿ ಐಡಿ ಕಾರ್ಡ್​ ಅನ್ನು ವಶಕ್ಕೆ ಪಡೆಯಲಾಗಿದೆ..

five arrested under raid by fake IT officers case in bangalore
ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದರ ಮೇಲೆ ದಾಳಿ ಪ್ರಕರಣ

ಬೆಂಗಳೂರು : ಐಟಿ (ಆದಾಯ ತೆರಿಗೆ) ಅಧಿಕಾರಿಗಳ ಸೋಗಿನಲ್ಲಿ ಆದಾಯ ತೆರಿಗೆ ಪಾವತಿಸಿಲ್ಲ ಎನ್ನುವ ನೆಪವೊಡ್ಡಿ ಮನೆಯೊಂದರ ಮೇಲೆ ದಾಳಿ ಮಾಡಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

ಪ್ರಕರಣದ ಸಂಬಂಧ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿ ಹಣ, ಕಾರು, ಗನ್ ವಶಕ್ಕೆ ಪಡೆದಿದ್ದಾರೆ. ಎಂ. ಮಂಜುನಾಥ್, ಮಹಮ್ಮದ್ ಶೋಯಬ್, ಟಿ.ಸಿ ಪ್ರಶಾಂತ್ ಕುಮಾರ್, ವೈ.ಸಿ ದುರ್ಗೇಶ್, ಕೆ.ಕುಮಾರ್ ಬಂಧಿತರು.

ಐಟಿ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದರ ಮೇಲೆ ದಾಳಿ ಪ್ರಕರಣ.. ಡಿಸಿಪಿ ವಿನಾಯಕ್ ಪಾಟೀಲ್ ಮಾಹಿತಿ ನೀಡಿರುವುದು..

ಆದಾಯ ತೆರಿಗೆ ಪಾವತಿಸದ ಹಿನ್ನೆಲೆ ದಾಳಿ ನಡೆಸಲಾಗುತ್ತಿದೆ ಎಂದು ಹೇಳಿಕೊಂಡು ಸಂಜಯನಗರದ ಮನೆಯೊಂದರ ಮೇಲೆ ದಾಳಿ ನಡೆಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೆ ಮಾಲೀಕ ಆದಾಯ ತೆರಿಗೆ ಪಾವತಿಸಿಲ್ಲ ಎಂಬ ಮಾಹಿತಿ ಖದೀಮರಿಗೆ ಮೊದಲೇ ದೊರೆತಿತ್ತು.

ಮನೆಯಲ್ಲಿದ್ದವರನ್ನು ಹೆದರಿಸಿ ಮನೆಯಲ್ಲಿದ್ದ 3.5 ಲಕ್ಷ ರೂಪಾಯಿ ನಗದು ಮತ್ತು ಏರ್ ಗನ್ ಅನ್ನು ಆರೋಪಿಗಳು ವಶಕ್ಕೆ ಪಡೆದು ಪರಾರಿಯಾಗಿದ್ದರು ಎಂದು ಡಿಸಿಪಿ ವಿನಾಯಕ್ ಪಾಟೀಲ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ.

ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳು

ಇದನ್ನೂ ಓದಿ:ಪತಿಯಿಂದ ನಿತ್ಯವೂ ಕಿರುಕುಳ; ಪುತ್ರನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಈ ಫೇಕ್ ದಾಳಿ ಕುರಿತು ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸ್ ಸಿಬ್ಬಂದಿ 5 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 1.7 ಲಕ್ಷ ರೂಪಾಯಿ ನಗದು, ಕಾರು, ಏರ್​​​ಗನ್, ನಕಲಿ ಐಡಿ ಕಾರ್ಡ್​ ಅನ್ನು ವಶಕ್ಕೆ ಪಡೆಯಲಾಗಿದೆ.

ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಸಾಕಷ್ಟು ಕಡೆಗಳಲ್ಲಿ ಸುಲಿಗೆ, ಮೋಸ ಮಾಡಿರುವುದು ಸಹ ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ. ಹೆಚ್ಚಿನ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಪಿ ವಿನಾಯಕ್ ಪಾಟೀಲ್ ಹೇಳಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details