ಕರ್ನಾಟಕ

karnataka

ವಿದ್ಯಾಭ್ಯಾಸ ಬಹಳ ಮುಖ್ಯ.. ಹಿಜಾಬ್ ಬಗ್ಗೆ ಮಕ್ಕಳನ್ನು ಗುರುಗಳು, ಪೋಷಕರು ಮನವೊಲಿಸಲಿ ಎಂದ ಡಿಕೆಶಿ

By

Published : Mar 26, 2022, 4:58 PM IST

Updated : Mar 26, 2022, 5:33 PM IST

ಹಿಜಾಬ್ ವಿಚಾರದಲ್ಲಿ ನ್ಯಾಯಾಲಯ ಒಂದು ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ತಾರೆ, ಕೆಲವರು ಒಪ್ಪಲ್ಲ. ಈ ಕೋರ್ಟ್ ತೀರ್ಪಿನ ಬಳಿಕ ಸುಪ್ರೀಂಕೋರ್ಟ್​ಗೂ ಹೋಗಲು ಅವಕಾಶವಿದೆ. ಗುರುಗಳು, ಪೋಷಕರು ವಿದ್ಯಾರ್ಥಿಗಳ ಮನವೊಲಿಸಬೇಕು ಎಂದು ಡಿಕೆಶಿ ಸಲಹೆ ನೀಡಿದ್ದಾರೆ.

kpcc-president-dk-shivakumar-on-hijab-and-siddramaiah-statement
ವಿಧ್ಯಾಭ್ಯಾಸ ಬಹಳ ಮುಖ್ಯ.. ಹಿಜಾಬ್ ಬಗ್ಗೆ ಮಕ್ಕಳನ್ನು ಗುರುಗಳು, ಪೋಷಕರು ಮನವೊಲಿಸಲಿ: ಡಿಕೆಶಿ

ಬೆಂಗಳೂರು:ವಿದ್ಯಾಭ್ಯಾಸ ಬಹಳ ಮುಖ್ಯ. ಹಿಜಾಬ್ ವಿಚಾರದಲ್ಲಿ ಮಕ್ಕಳನ್ನು ತಂದೆ-ತಾಯಿಗಳು, ಗುರುಗಳು ಮನವೊಲಿಸಬೇಕು‌ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುರುಗಳು ಹೇಳಿದರೆ ಮಕ್ಕಳು ಕೇಳ್ತಾರೆ. ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ಇರುವ ವಿಚಾರಗಳಿಗೆ ಬೆಲೆ ಕೊಡುತ್ತದೆ. ಸಂವಿಧಾನದಲ್ಲಿ ಇರುವ ವಿಚಾರಗಳೇ ನಮ್ಮ ಬೈಬಲ್, ನಮ್ಮ ಕುರಾನ್, ನಮ್ಮ ಭಗವದ್ಗೀತೆ ಎಂದು ಡಿಕೆಶಿ ಹೇಳಿದ್ದಾರೆ.

ಹಿಜಾಬ್​ ಮುಸ್ಲಿಂ ಧರ್ಮದ ಅತ್ಯಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳಲ್ಲಿ ಮಕ್ಕಳು ಸಮವಸ್ತ್ರ ಮಾತ್ರ ಧರಿಸಬೇಕು ಎಂದು ಸರ್ಕಾರದ ಆದೇಶವನ್ನು ಹೈಕೋರ್ಟ್​ ಎತ್ತಿಹಿಡಿದಿದೆ. ನ್ಯಾಯಾಲಯ ಒಂದು ತೀರ್ಪನ್ನು ಕೊಟ್ಟಿದೆ. ಕೆಲವರು ಅದನ್ನು ಒಪ್ತಾರೆ, ಕೆಲವರು ಒಪ್ಪಲ್ಲ. ಈ ಕೋರ್ಟ್ ತೀರ್ಪಿನ ಬಳಿಕ ಸುಪ್ರೀಂಕೋರ್ಟ್​ಗೂ ಹೋಗಲು ಅವಕಾಶವಿದೆ. ನ್ಯಾಯಾಲಯದ ತೀರ್ಪನ್ನು ಸರಿಯಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯರ ಹೇಳಿಕೆಗೆ ಅವರೇ ಉತ್ತರ ಕೊಡ್ತಾರೆ:ಸಿದ್ದರಾಮಯ್ಯ ಅವರು ಸ್ವಾಮೀಜಿಗಳ ಮೇಲಿನ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಚಾರಕ್ಕೆ ಅವರೇ ಉತ್ತರ ಕೊಡ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿದ್ದಾರೆ. ಅವರೂ ಎಲ್ಲಾ ಧರ್ಮ, ಸ್ವಾಮೀಜಿಗಳ ಮೇಲೆ ಗೌರವವಿದೆ ಅಂದಿದ್ದಾರೆ. ಅವರು ಸಿಎಂ ಆಗಿದ್ದಾಗ ಎಲ್ಲಾ ಧರ್ಮಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ? ಅದಕ್ಕೆ ಅವರೇ ಉತ್ತರ ಕೊಡ್ತಾರೆ ಎಂದು ಡಿಕೆಶಿ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ:ಶಿಗ್ಗಾಂವಿ ಜನರ ಮತಕ್ಕೆ ತ್ರಿಬಲ್​ ಪವರ್​ ಇದೆ.. ಸಿಎಂ ಬೊಮ್ಮಾಯಿ ಹೀಗಂದಿದ್ದೇಕೆ?

Last Updated : Mar 26, 2022, 5:33 PM IST

ABOUT THE AUTHOR

...view details