ಕರ್ನಾಟಕ

karnataka

ಕಾಂಗ್ರೆಸ್ ಸೇರ್ಪಡೆ ವದಂತಿ: ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

By

Published : Sep 20, 2021, 7:45 PM IST

mla arvind bellad

ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ‌ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಸುಳ್ಳು ಸಂದೇಶ ಹಬ್ಬಿಸುವ ಪ್ರಯತ್ನ ನಡೆದಿದೆ‌ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

ಧಾರವಾಡ:ನಾಯಕತ್ವ ಬದಲಾವಣೆ ಹಾಗೂ ಮುಖ್ಯಮಂತ್ರಿ ರೇಸ್​​ನಲ್ಲಿದ್ದ ಶಾಸಕ ಅರವಿಂದ ಬೆಲ್ಲದ್​​ ಬಿಜೆಪಿ ತೊರೆಯುತ್ತಾರೆಂಬ ವದಂತಿ ಹರಿದಾಡುತ್ತಿದೆ‌. ಈ ವದಂತಿ ಹಬ್ಬಿದ ಹಿನ್ನೆಲೆ ಶಾಸಕ ಬೆಲ್ಲದ್ ಸ್ಪಷ್ಟನೆ ನೀಡಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿದ್ದು, ಈ ಬಗ್ಗೆ ಶಾಸಕ ಬೆಲ್ಲದ​​ ಲಿಖಿತವಾಗಿ ಸ್ಪಷ್ಟನೆ ನೀಡಿದ್ದಾರೆ. ನಾನು ಪಕ್ಷ ತೊರೆಯುತ್ತೇನೆ ಎಂಬ ಸುದ್ದಿ‌ ಸತ್ಯಕ್ಕೆ ದೂರವಾಗಿದೆ. ನನ್ನ ವಿಚಾರದಲ್ಲಿ ಕಪೋಲಕಲ್ಪಿತ ಸುದ್ದಿ ವರದಿಯಾಗುತ್ತಿದೆ ಎಂದು ಹೇಳಿದ್ದಾರೆ.

ಶಾಸಕ ಅರವಿಂದ ಬೆಲ್ಲದ ಸ್ಪಷ್ಟನೆ

ಸುಳ್ಳುಗಳನ್ನೇ ನಿಜವೆಂದು ಪ್ರತಿಷ್ಠಾಪಿಸುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಈ ಬಗ್ಗೆ ನಾನೇ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ಆರ್.ಎಸ್.ಎಸ್. ಸೇರಿದ ನಂತರ ಸಂಘ ಪರಿವಾರದ ಬಗೆಗಿನ ನನ್ನ ನಿಷ್ಠೆ ಅಚಲವಾಗಿದೆ. ಬಿಜೆಪಿ ತೊರೆಯುವ ವಿಚಾರ ಕಾಯಾ, ವಾಚಾ ಮನಸಾ ಕಲ್ಪಿಸಿಕೊಳ್ಳಲು ಸಹ ಸಾಧ್ಯವಿಲ್ಲ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಬೆಲ್ಲದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಬೆಲ್ಲದ್​ಗೆ ಸಚಿವ ಸ್ಥಾನ ಮಿಸ್ ಆಗಿದ್ದಕ್ಕೆ ನಾಳೆ ಧಾರವಾಡ ಬಂದ್: ವೈರಲ್ ಸುದ್ದಿ ನಂಬಬೇಡಿ

ABOUT THE AUTHOR

...view details