ಕರ್ನಾಟಕ

karnataka

ಯಾತ್ರಿ ನಿವಾಸ ಉದ್ಘಾಟನೆಗೆ ವಿನಯ್ ಕುಲಕರ್ಣಿ ಬೆಂಬಲಿಗರ ವಿರೋಧ: ಬಿಜೆಪಿ ನಾಯಕರಿಗೆ ಮುಜುಗರ

By

Published : May 1, 2022, 3:10 PM IST

ಮಾಜಿ ಸಚಿವ ವಿನಯ್ ಕುಲಕರ್ಣಿ ಅವಧಿಯಲ್ಲಿ ಹೆಬ್ಬಳ್ಳಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಆದರೆ ಯಾತ್ರಿ ನಿವಾಸದ ಮುಂದೆ ಹಾಕಲಾಗುವ ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಕುಲಕರ್ಣಿ ಹೆಸರು ಹಾಕದೇ ಇರುವುದಕ್ಕೆ ಬೆಂಬಲಿಗರಿಂದ ವಿರೋಧ ವ್ಯಕ್ತವಾಗಿದೆ.

Union Minister Pralha Joshi and C.T.ravi who came to inaugurate the new pilgrim residence
ನೂತನ ಯಾತ್ರಿ ನಿವಾಸ ಉದ್ಘಾಟನೆಗೆ ಬಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಿ.ಟಿ. ರವಿ

ಧಾರವಾಡ: ನೂತನ ಯಾತ್ರಿ ನಿವಾಸ ಉದ್ಘಾಟನೆಗೆ ಮಾಜಿ‌ ಸಚಿವ ವಿನಯ್ ಬೆಂಬಲಿಗರು ವಿರೋಧ ವ್ಯಕ್ತಪಡಿಸಿದ ಘಟನೆ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ.‌ ಇದರಿಂದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಶಾಸಕ ಅಮೃತ ದೇಸಾಯಿ ಅವರಿಗೆ ತೀವ್ರ ಮುಜುಗರವಾಗಿದೆ.

ನೂತನ ಯಾತ್ರಿ ನಿವಾಸ ಉದ್ಘಾಟನೆಗೆ ವಿನಯ್ ಬೆಂಬಲಿಗರ ವಿರೋಧ: ಬಿಜೆಪಿ ನಾಯಕರಿಗೆ ಮುಜುಗರ

ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ನೂತನ ಯಾತ್ರಿ ನಿವಾಸದ ಉದ್ಘಾಟನೆಗೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹಾಗೂ ಶಾಸಕ ಅಮೃತ ದೇಸಾಯಿ ಅವರಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಂಬಲಿಗರು ಶಾಕ್ ನೀಡಿದರು. ವಿನಯ್ ಕುಲಕರ್ಣಿ ಅವರ ಅವಧಿಯಲ್ಲಿ ಹೆಬ್ಬಳ್ಳಿಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಆದರೆ ಯಾತ್ರಿ ನಿವಾಸದ ಮುಂದೆ ಹಾಕಲಾಗುವ ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಕುಲಕರ್ಣಿ ಅವರ ಹೆಸರು ಹಾಕದೇ ಇರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಯಾತ್ರಿ ನಿವಾಸಕ್ಕೆ ಬೀಗ ಹಾಕಿ ಉದ್ಘಾಟನೆಗೆ ಅವಕಾಶ ಮಾಡಿಕೊಡದೆ ವಿರೋಧಿಸಿದ್ದಾರೆ.

ಯಾತ್ರಿ ನಿವಾಸದ ಮುಂದೆ ಜಮಾಯಿಸಿದ್ದ ವಿನಯ್ ಬೆಂಬಲಿಗರು, ಕಲ್ಲಿನ ಬೋರ್ಡ್‌ನಲ್ಲಿ ವಿನಯ್ ಅವರ ಹೆಸರನ್ನೇ ಹಾಕಿಸಿಲ್ಲ. ಅವರ ಹೆಸರು ಹಾಕಿಸಿದ ನಂತರ ಇದನ್ನು ಉದ್ಘಾಟನೆ ಮಾಡಿ ಎಂದು ಪಟ್ಟು ಹಿಡಿದರು.‌ ಶಾಸಕ ಅಮೃತ ದೇಸಾಯಿ ಅವರು ಪ್ರತಿಕ್ರಿಯಿಸಿ, ಶಿಷ್ಟಾಚಾರದ ಪ್ರಕಾರ ಇದನ್ನು ಉದ್ಘಾಟನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹೇಳಿದರು. ಇದಕ್ಕೆ ಒಂದು ಮಾತನಾಡದ ಸಚಿವ ಜೋಶಿ ನಮಗೇನೂ ಗೊತ್ತಿಲ್ಲ ಎಂಬಂತೆ ಅಲ್ಲಿಂದ ಹೊರ ನಡೆದರು.

ಇದನ್ನೂ ಓದಿ:ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರ: ಸೂಕ್ತ ಸಮಯದಲ್ಲಿ ಸೂಕ್ತವಾದ ನಿರ್ಧಾರ ಎಂದ ಜೋಶಿ

ABOUT THE AUTHOR

...view details