ಕರ್ನಾಟಕ

karnataka

ಗ್ರಾಪಂ ಸದಸ್ಯನ ಕೊಲೆ: ನಾಲ್ವರು ಆರೋಪಿಗಳ ಬಂಧನ

By

Published : Nov 7, 2020, 2:55 AM IST

ಜಮೀನು ವಿವಾದದ ಹಿನ್ನೆಲೆ ಗ್ರಾಪಂ ಸದಸ್ಯನ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

gram panchayat member
ಗ್ರಾಪಂ ಸದಸ್ಯನ ಕೊಲೆ

ಕಲಬುರಗಿ: ಕಡಗಂಚಿ ಗ್ರಾಮ ಪಂಚಾಯತ್ ಸದಸ್ಯನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಆರ್.ಜಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗ್ರಾಪಂ ಸದಸ್ಯ ಶಿವಲಿಂಗಪ್ಪ ಭೋಗಶೆಟ್ಟಿ
ಶರಣಬಸಪ್ಪ @ ಶರಣು ಮಾದಗುಂಡ, ಯೋಗಿನಾಥ್ ಮಾದಗುಂಡ, ಸಾಯಿನಾಥ ಮಾದಗುಂಡ ಹಾಗೂ ಅಶೋಕ ರಾಜಾಪುರ ಬಂಧಿತ ಆರೋಪಿಗಳು. ಬಂಧಿತರೆಲ್ಲರೂ ಆಳಂದ ತಾಲೂಕಿನ ಕಡಗಂಚಿ ಗ್ರಾಮದವರಾಗಿದ್ದಾರೆ.
ಗ್ರಾಪಂ ಸದಸ್ಯನ ಕೊಲೆ: ನಾಲ್ವರು ಆರೋಪಿಗಳ ಬಂಧನ
ಜಮೀನು ವಿವಾದದ ಹಿನ್ನೆಲೆ ಕಲಬುರಗಿಯ ಕೈಲಾಶ ನಗರದಲ್ಲಿ ನವೆಂಬರ್ 2 ರಂದು ರಾತ್ರಿ ಕಡಗಂಚಿ ಗ್ರಾಪಂ ಸದಸ್ಯ ಶಿವಲಿಂಗಪ್ಪ ಭೋಗಶೆಟ್ಟಿ ಎಂಬುವರನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದು ಆರೋಪಿಗಳು ತೆಲೆಮರೆಸಿಕೊಂಡಿದ್ದರು. ಸದ್ಯ ನಾಲ್ವರನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೂ ಜಾಲ ಬೀಸಲಾಗಿದೆ ಎಂದು ಡಿಸಿಪಿ ಕಿಶೋರ್ ಬಾಬು ತಿಳಿಸಿದ್ದಾರೆ.

ABOUT THE AUTHOR

...view details