ಕಲಬುರಗಿ: ಮೈತ್ರಿ ಸರ್ಕಾರದಲ್ಲಿ ಚಿಂಚೋಳಿ ಕ್ಷೇತ್ರದ ಅಭಿವೃದ್ಧಿಗಾಗಿ ಎಸ್ಸಿಸಿಪಿ ಹಾಗೂ ಟಿಎಸ್ಪಿ ಯೋಜನೆಯಡಿ ಮಂಜೂರು ಮಾಡಲಾಗಿದ್ದ ₹ 30 ಕೋಟಿ ಅನುದಾನದಲ್ಲಿ ಬಿಜೆಪಿ ಸರ್ಕಾರ ₹ 20 ಕೋಟಿ ಕಡಿತಗೊಳಿಸಿರುವ ಕಾರಣ ಶಾಸಕ ಪ್ರಿಯಾಂಕ್ ಖರ್ಗೆ ಅವರು ಟ್ವಿಟರ್ನಲ್ಲಿ ಫುಲ್ ಗರಂ ಆಗಿದ್ದಾರೆ.
ಮೈತ್ರಿ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವುದಾಗಿ ಜಾಧವ್ ಹೇಳಿದ್ದರು. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಬಿಡುಗಡೆಗೆ ಮಂಜೂರು ಮಾಡಿದ್ದ ₹ 30 ಕೋಟಿ ಅನುದಾನವನ್ನು ಬಿಜೆಪಿ ಸರ್ಕಾರ ₹ 10 ಕೋಟಿಗೆ ಇಳಿಸಿದೆ. ಅದನ್ನು ಮತ್ತೆ ರೂ 30 ಕೋಟಿ ಮಾಡಲು ಪತ್ರ ಬರೆದು ಆಗ್ರಹಿಸಿದ್ದೇನೆ. ಇದು ಜಾಧವ್ ಅವರಿಗೆ ಅನುಕೂಲವಾಗುತ್ತದೆ ಎನ್ನುವ ಭರವಸೆ ನನಗಿದೆ ಅಥವಾ ಅವರು ಮತ್ತೊಮ್ಮೆ ಪಕ್ಷ ತೊರೆಯಬೇಕಾಗುತ್ತದೆ ಎಂದು ಟ್ವಿಟರ್ನಲ್ಲಿ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ. ಅನುದಾನದ ಬಳಕೆಗಾಗಿ ಅಂದಾಜು ಪಟ್ಟಿ ತಯಾರಿಸಿ ಕಾಮಗಾರಿ ಪ್ರಾರಂಭಿಸುವ ಹಂತದಲ್ಲಿರುವಾಗಲೇ ರಾಜ್ಯ ಸರ್ಕಾರ ಅನುದಾನ ಕಡಿತಗೊಳಿಸಿ ಉಳಿದ ಮೊತ್ತಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಲ್ಲಿಸಲು ಆದೇಶಿಸಿದೆ. ತಡೆ ಹಿಡಿದಿರುವ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಆಗ್ರಹಿಸಿದ್ದಾರೆ.
ಇನ್ನು ಚಿಂಚೋಳಿ ಮತಕ್ಷೇತ್ರಕ್ಕೆ 30 ಕೋಟಿ ಅನುದಾನದಲ್ಲಿ ಕಡಿತಗೊಳಿಸಲಾಗಿರುವ ರೂ 20 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಶಾಸಕ ಪ್ರಿಯಾಂಕ್ ಖರ್ಗೆ ಸರಕಾರಕ್ಕೆ ಆಗ್ರಹಿಸಿದ್ದಾರೆ. ಉಪಮುಖ್ಯಮಂತ್ರಿಗಳು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಪತ್ರ ಬರೆದಿರುವ ಪ್ರಿಯಾಂಕ್ ಖರ್ಗೆ, ನಾನು ಸಚಿವರಾಗಿದ್ದಾಗ ಚಿಂಚೋಳಿ ಮತಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದು, ಎಸ್ ಸಿ ಸಿಪಿ ಹಾಗೂ ಟಿ ಎಸ್ ಪಿ ಯೋಜನಯಡಿಯಲ್ಲಿ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ರೂ 20 ಕೋಟಿ ಹಾಗೂ ಪಟ್ಟಣ ಪ್ರದೇಶದ ಅಭಿವೃದ್ದಿಗೆ ರೂ 10 ಕೋಟಿ ಹೀಗೆ ಒಟ್ಟು ರೂ 30 ಕೋಟಿ ಅನುದಾನ ಬಿಡುಗಡೆ ಮಾಡಲಾಗಿತ್ತು. ಅನುದಾನದ ಬಳಕೆಗಾಗಿ ಅಂದಾಜು ಪಟ್ಟಿ ತಯಾರಿಸಿ ಕಾಮಗಾರಿ ಪ್ರಾರಂಭಿಸುವ ಹಂತದಲ್ಲಿರುವಾಗಲೇ ರಾಜ್ಯ ಸರಕಾರ ರೂ 20 ಕೋಟಿ ಅನುದಾನದಲ್ಲಿ ಕಡಿತಗೊಳಿಸಿ ಕೇವಲ ರೂ 10 ಕೋಟಿಗೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ಸಲ್ಲಿಸಲು ಆದೇಶಿಸಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿ ಈ ಕೂಡಲೇ ತಡೆ ಹಿಡಿದಿರುವ ರೂ 20 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಒಟ್ಟು ರೂ 30 ಕೋಟಿ ಅನುದಾನದಲ್ಲಿ ಕ್ಷೇತ್ರ ಅಭಿವೃದ್ದಿಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.Conclusion: