ಕರ್ನಾಟಕ

karnataka

ಮತಾಂತರ ಯತ್ನದ 'ಗ್ರಹಿಕೆ' : ಮನೆಯೊಂದರ ಮೇಲೆ ಹಿಂದೂ ಸಂಘಟನೆಗಳ ದಾಳಿ

By

Published : Sep 26, 2021, 1:57 AM IST

'Perception' of conversion: Hindu organizations attack on a house

ಮತಾಂತರ ಯತ್ನ ನಡೆಸಲಾಗುತ್ತಿದೆ ಎಂದು ಸ್ಥಳೀಯರಲ್ಲಿ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ:ಮಂಗಳೂರಿನ ಕೊಂಚಾಡಿಯಲ್ಲಿರುವ ಮನೆಯೊಂದಕ್ಕೆ ವ್ಯಕ್ತಿಯೊಬ್ಬರು ಬಂದು ಮತಾಂತರಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಗ್ರಹಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ ಘಟನೆ ನಡೆದಿದೆ.

ಕೊಂಚಾಡಿಯ ಮನೆಯೊಂದಕ್ಕೆ ವ್ಯಕ್ತಿಯೋರ್ವರು ಆಗಮಿಸಿದ ವೇಳೆ ಮತಾಂತರ ಯತ್ನ ನಡೆಸಲಾಗುತ್ತಿದೆ ಎಂದು ಸ್ಥಳೀಯರಲ್ಲಿ ವದಂತಿ ಹಬ್ಬಿ ಈ ಘಟನೆ ನಡೆದಿದೆ.

ಈ ವೇಳೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದು, ಕೆಲ ಹೊತ್ತು ಬಿಗುವಿನ ವಾತವರಣ ನಿರ್ಮಾಣವಾಗಿತ್ತು. ದಾಳಿ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮನೆಯವರು ಮತ್ತು ಬಂದ ವ್ಯಕ್ತಿ ಪರಿಚಯಸ್ಥರಾಗಿದ್ದಾರೆ. ಅಪರಿಚಿತ ವ್ಯಕ್ತಿ ಮತಾಂತರಕ್ಕೆ ಪ್ರಯತ್ನ ಮಾಡಿದ್ದಾರೆ ಎಂದು ಗ್ರಹಿಸಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಶ್ರೀಕ್ಷೇತ್ರ ಧರ್ಮಸ್ಥಳ ಭೇಟಿ

ABOUT THE AUTHOR

...view details