ಕರ್ನಾಟಕ

karnataka

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಅಪಘಾತ; ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್ ಯುವತಿಯರು ಸಾವು

By

Published : Jun 19, 2022, 11:33 AM IST

Updated : Jun 19, 2022, 11:50 AM IST

ಮೈಸೂರು-ಹುಣಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾಫ್ಟ್​ವೇರ್ ಎಂಜಿನಿಯರ್ ವೃತ್ತಿಯಲ್ಲಿದ್ದ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ.

accident
accident

ಮೈಸೂರು: ಹಾಲಿನ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಯುವತಿಯರಿಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು-ಹುಣಸೂರು ಹೆದ್ದಾರಿಯ ರಂಗಯ್ಯನ ಕೊಪ್ಪಲು ಗೇಟ್ ಬಳಿ ನಡೆಯಿತು. ಮೈಸೂರಿನ ಚಂದ್ರಶೇಖರ್ ಅವರ ಪುತ್ರಿ 24 ವರ್ಷದ ಜೀವಿತಾ ಹಾಗೂ ಕೆ.ಪಿ.ಅಗ್ರಹಾರದ ಪ್ರಸನ್ನರವರ ಪುತ್ರಿ 24 ವರ್ಷದ ಪ್ರತಿಕ್ಷಾ ಮೃತರು.

ಇಬ್ಬರೂ ಸಾಫ್ಟ್​ವೇರ್ ಇಂಜಿನಿಯರುಗಳಾಗಿದ್ದು, ವೀಕೆಂಡ್ ಕಾರಣಕ್ಕೆ ಝೂಮ್ ಕಂಪನಿಯ ಮಾರುತಿ ಕಾರಿನಲ್ಲಿ ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ 275ರ ಮೂಲಕ ಹುಣಸೂರು ಕಡೆಗೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಮುಂಬದಿಯ ಟೈರ್ ಪಂಚರ್ ಆಗಿ, ನಿಯಂತ್ರಣ ಸಿಗದೇ ಎದುರಿಗೆ ಬರುತ್ತಿದ್ದ ಹಾಲಿನ ಟ್ಯಾಂಕರ್​​ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯುವತಿಯರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕಾರಿನಲ್ಲಿ ಪತ್ತೆಯಾದ ಗುರುತಿನ ಚೀಟಿ

ಬಿಳಿಕೆರೆ ಪೊಲೀಸರು ಸ್ಥಳಕ್ಕಾಗಮಿಸಿ ಶವಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಕಾರಿನಲ್ಲಿದ್ದ ದಾಖಲೆಗಳಿಂದ ಮೃತರ ಹಿನ್ನೆಲೆ ತಿಳಿದುಬಂದಿದೆ. ಘಟನೆಯಿಂದ ಕೆಲಹೊತ್ತು ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು ಸಂಚಾರ ಸ್ಥಗಿತವಾಗಿತ್ತು. ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕ್ಯಾಂಟರ್-ಕಾರು ಮುಖಾಮುಖಿ ಡಿಕ್ಕಿ: ಧರ್ಮಸ್ಥಳಕ್ಕೆ ಹೊರಟ ತಂದೆ-ಮಗ ಸಾವು

Last Updated : Jun 19, 2022, 11:50 AM IST

ABOUT THE AUTHOR

...view details