ಮೈಸೂರು: ಸಿದ್ದರಾಮಯ್ಯನ ಗುಣ ರಾಕೇಶ್ ಸಿದ್ದರಾಮಯ್ಯನಿಗೆ ಇತ್ತಾ? ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಪ್ರಶ್ನಿಸಿದರು.
ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಎಸ್.ಆರ್.ಬೊಮ್ಮಾಯಿ ರೀತಿ ಬಸವರಾಜ ಬೊಮ್ಮಾಯಿ ಆಗಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ರೀತಿ ಅವರ ಮಗ ರಾಕೇಶ್ ಕೂಡ ಆಗಲಿಲ್ಲ. ರಾಕೇಶ್ ಏನಾದ್ರು ಅಂತಾ ಎಲ್ಲರಿಗೂ ಗೊತ್ತಿದೆ. ಮಾಜಿ ಸಿಎಂ ಆಗಿ ಹೀಗೆಲ್ಲಾ ಹೇಳೋದು ಎಷ್ಟು ಸರಿ?. ಮಹಾತ್ಮ ಗಾಂಧಿ ರೀತಿ ಮಗ ಆಗಲಿಲ್ಲ ಅಂತ ಹೇಳಿದ್ದ ಸಿದ್ದರಾಮಯ್ಯ, ಯಾರನ್ನು ಹೀಗೆ ಹೋಲಿಕೆ ಮಾಡಬಾರದು. ಹಿರಿಯ ರಾಜಕಾರಣಿಗೆ ಇದು ಶೋಭೆಯಲ್ಲ ಎಂದು ಟೀಕಿಸಿದರು.