ಕರ್ನಾಟಕ

karnataka

ಮೈಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಬಲಿ, ಬಸ್​ಗೆ​​ ಡಿಕ್ಕಿಯಾಗಿ ಸ್ಕೂಟರ್​ ಸವಾರ ಸಾವು!

By

Published : Dec 7, 2021, 12:55 PM IST

ಎರಡು ಅಪಘಾತ ಪ್ರಕರಣದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ..

mysore student died by current shock
ಮೈಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು

ಮೈಸೂರು: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ರಾಷ್ಟ್ರಪತಿ ರಸ್ತೆಯಲ್ಲಿ ನಡೆದಿದೆ. ಮತ್ತೊಂದು ಪ್ರಕರಣದಲ್ಲಿ ಬಸ್​ಗೆ ಡಿಕ್ಕಿ ಹೊಡೆದು ಸ್ಕೂಟರ್​ ಸವಾರ ಸಾವನ್ನಪ್ಪಿದ್ದಾರೆ.

ಮೈಸೂರಿನಲ್ಲಿ ಬಸ್​ಗೆ​​ ಡಿಕ್ಕಿಯಾಗಿ ಸ್ಕೂಟರ್​ ಸವಾರ ಸಾವು

ಮೊಲದ ಪ್ರಕರಣದಲ್ಲಿ ತ್ಯಾಗರಾಜ ಕಾಲೋನಿಯ ಶ್ರೀನಿವಾಸ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸ್ನೇಹಿತರ ಜೊತೆ ಸೇರಿ ಟ್ಯೂಷನ್ ನಾಮಫಲಕ ತೆಗೆಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ತೀವ್ರ ಅಸ್ವಸ್ಥರಾಗಿ ಕೆಳಗೆ ಬಿದ್ದಿದ್ದಾರೆ.

ತಕ್ಷಣ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ರೀನಿವಾಸ್ ಮೃತಪಟ್ಟಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್​ಗೆ​​ ಡಿಕ್ಕಿಯಾಗಿ ಸ್ಕೂಟರ್​ ಸವಾರ ಸಾವು :ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಿಲೇನಿಯಮ್ ಸರ್ಕಲ್​​ನಲ್ಲಿ‌ ನಡೆದಿದೆ.

ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್ ನಿಲ್ದಾಣದತ್ತ ಹೊರಟ ರಾಜಹಂಸ ಬಸ್​​ಗೆ ಸ್ಕೂಟರ್​ ಸವಾರ ಡಿಕ್ಕಿ ಹೊಡೆದ ರಭಸಕ್ಕೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎನ್.ಆರ್. ಸಂಚಾರಿ ಪೊಲೀಸರು ಹಾಗೂ ಎನ್.ಆರ್. ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಮೃತರ ವಿವರ ಇನ್ನೂ ತಿಳಿದು ಬಂದಿಲ್ಲ.

ಇದನ್ನೂ ಓದಿ:ಪಾದಚಾರಿಗೆ ಗುದ್ದಿದ ಬಿಆರ್‌ಟಿಎಸ್ ಬಸ್.. ಗಾಯಾಳು ಸ್ಥಿತಿ ಗಂಭೀರ!

ABOUT THE AUTHOR

...view details