ತುಮಕೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ಯೋಧನ ಅಂತ್ಯಕ್ರಿಯೆಯನ್ನು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.
ಮೂಲತಃ ಚಿಕ್ಕನಾಯಕನಹಳ್ಳಿಯವರಾಗಿದ್ದ ಯೋಧ ಅಗ್ಸರ್ ಖಾನ್ ಮೇ 23ರಂದು ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ನಿನ್ನೆ ರಾತ್ರಿಯೇ ಅವರ ಶವವನ್ನು ಚಿಕ್ಕನಾಯಕನಹಳ್ಳಿಗೆ ತರಲಾಗಿತ್ತು.