ಕರ್ನಾಟಕ

karnataka

ಸ್ನಾನದ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ: ಕಾರಣವಿಷ್ಟೇ..

By

Published : Jun 30, 2020, 3:08 PM IST

Updated : Jun 30, 2020, 5:43 PM IST

ಮೈಸೂರಿನ ಸುಣ್ಣದ ಕೇರಿಯಲ್ಲಿ ಯುವಕನೊಬ್ಬ ಸ್ನಾನದ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

17 year old boy suicide in mysore
ಆತ್ಮಹತ್ಯೆ ಮಾಡಿಕೊಂಡ ಯುವಕ

ಮೈಸೂರು:ಸ್ನಾನದ ಕೋಣೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುಣ್ಣದಕೇರಿಯಲ್ಲಿ ನಡೆದಿದೆ.

ದರ್ಶನ್ (17) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ತನ್ನ ಬೈಕ್​​​​​ಗೆ ನಂಬರ್ ಪ್ಲೇಟ್ ಹಾಕಿಸಿರಲಿಲ್ಲ. ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಅದನ್ನು ಪ್ರಶ್ನಿಸಿ ಈತನಿಂದ ಬೈಕ್​​​​​ ಅನ್ನು ವಶಕ್ಕೆ ಪಡೆದಿದ್ದರು. ಅದನ್ನು ಹಿಂಪಡೆಯಲು ಠಾಣೆಗೆ ಹೋಗಿದ್ದಾಗ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿ ನಂತರ ಬೈಕ್​​ ಮರಳಿಸಿದ್ದಾರೆ ಎನ್ನಲಾಗಿದೆ.

ಯುವಕನ ಬೈಕ್​​

ನನ್ನ ಮಗನ ಆತ್ಮಹತ್ಯೆಗೆ ಕೆ.ಆರ್.ಠಾಣೆ ಪೊಲೀಸರೇ ಕಾರಣ. ಪೊಲೀಸರು ಕಿರುಕುಳ ನೀಡಿದ್ದರಿಂದ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ ಈತನ ಪೋಷಕರು, ತನಿಖೆ ಮಾಡಬೇಕೆಂದು ಆಗ್ರಹಿಸಿದರು. ಈ ಸಂಬಂಧ ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

Last Updated :Jun 30, 2020, 5:43 PM IST

ABOUT THE AUTHOR

...view details