ಹೈದರಾಬಾದ್: ಟಿ 20 ವಿಶ್ವಕಪ್ ಪಂದ್ಯಾಟದಲ್ಲಿ ಭಾರತವು ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ ತಂಡವನ್ನು ಸೋಲಿಸಿ ಶುಭಾರಂಭ ಪಡೆದುಕೊಂಡಿದೆ. ಆದರೂ ಭಾರತ ತಂಡದ ಬ್ಯಾಟಿಂಗ್, ಬೌಲಿಂಗ್ ಮತ್ತು ಕ್ಷೇತ್ರರಕ್ಷಣೆ ಮಾತ್ರವಲ್ಲದೆ ವಿವಿಧ ಆಯಾಮಗಳಲ್ಲಿ ಚಿಂತಿಸುವಾಗ ಭಾರತ ತಂಡವು ಮುಂದಿನ ಪ್ರದರ್ಶನದ ಬಗ್ಗೆ ಚರ್ಚಿಸಬೇಕಾಗುತ್ತದೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ: ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ಅದ್ಭುತ ಗೆಲುವನ್ನು ಸಾಧಿಸಿತ್ತು. ಕೊನೆಯ ಮೂರು ಓವರ್ಗಳಲ್ಲಿ ಅಸಾಧ್ಯವಾದ 48 ರನ್ ಗಳಿಸಿ ಭಾರತ ವಿಜಯದ ಪತಾಕೆ ಹಾರಿಸಿತು. ಕೊಹ್ಲಿಯ ಅದ್ಭುತ ಬ್ಯಾಟಿಂಗ್ ಪ್ರದರ್ಶನವು ಪಂದ್ಯದ ಗತಿಯನ್ನು ಬದಲಿಸಿತು.
ಕೊಹ್ಲಿ, ಪಾಂಡ್ಯ ಹೊರತಾಗಿ ಭಾರತದ ಓಪನಿಂಗ್ ಬ್ಯಾಟ್ಸ್ಮನ್ ಕೆ ಎಲ್ ರಾಹುಲ್ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸುತ್ತಿದ್ದು, ರಾಹುಲ್ ಸ್ಥಾನದಲ್ಲಿ ರಿಷಭ್ ಪಂತ್ ಗೆ ಅವಕಾಶ ನೀಡಬಹುದು. ಏಕೆಂದರೆ ಎಡಗೈ ಬ್ಯಾಟ್ಸ್ಮನ್ ಆಗಿರುವ ಪಂತ್ ಎದುರಾಳಿ ದಾಳಿಗೆ ಹೆಚ್ಚು ಪರಿಣಾಮಕಾರಿಯಾಗಬಹುದು.
ದಕ್ಷಿಣ ಆಫ್ರಿಕ ವಿರುದ್ಧದ ಪಂದ್ಯಕ್ಕೂ ಮುನ್ನ ಶನಿವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್, ಭಾನುವಾರ ಪರ್ತ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೆ ಎಲ್ ರಾಹುಲ್ ಆರಂಭಿಕ ಆಟಗಾರರಾಗಿ ಬರಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
'ರಾಹುಲ್ ಅವರು ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ. ಅದಾಗ್ಯೂ, ರಾಹುಲ್ ಪಾಕಿಸ್ತಾನದ ವಿರುದ್ಧ ಸ್ಟ್ರೈಕ್ ರೇಟ್ 50 ರಲ್ಲಿ 8 ಎಸೆತಗಳಲ್ಲಿ 4 ರನ್ ಮತ್ತು ನೆದರ್ಲ್ಯಾಂಡ್ ವಿರುದ್ಧ 12 ಎಸೆತಗಳಲ್ಲಿ ಅವರ 9 ರನ್ ಗಳಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಭಾರತದ ತಂಡಕ್ಕೆ ರಾಹುಲ್ ಅವರದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅವರು ತಮ್ಮ ಲಯವನ್ನು ಮರಳಿ ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.