ಕರ್ನಾಟಕ

karnataka

2ನೇ ಟಿ20: ಟಾಸ್​ ಗೆದ್ದ ಕೊಹ್ಲಿ ಬೌಲಿಂಗ್​ ಆಯ್ಕೆ, ಸೂರ್ಯ ಕುಮಾರ್ ಯಾದವ್​, ಇಶಾನ್​ ಕಿಶನ್ ಪದಾರ್ಪಣೆ

By

Published : Mar 14, 2021, 6:44 PM IST

ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿ ಸೋಲುಕಂಡಿದ್ದ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸುವ ಉದ್ದೇಶದಿಂದ ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯದಲ್ಲಿ ಅವಕಾಶ ನೀಡಿದೆ. ಅಕ್ಷರ್ ಪಟೇಲ್ ಮತ್ತು ಶಿಖರ್ ಧವನ್​ ಬದಲಿಗೆ ಇವರಿಬ್ಬರು ಆಡಲಿದ್ದಾರೆ.

ಇಂಗ್ಲೆಂಡ್ vs ಭಾರತ 2ನೇ ಟಿ20
ಇಂಗ್ಲೆಂಡ್ vs ಭಾರತ 2ನೇ ಟಿ20

ಅಹ್ಮದಾಬಾದ್​: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಹೀನಾಯ ಪ್ರದರ್ಶನ ತೋರಿ ಸೋಲುಕಂಡಿದ್ದ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲ ಸಾಧಿಸುವ ಉದ್ದೇಶದಿಂದ ಪ್ರಮುಖ ಬದಲಾವಣೆ ಮಾಡಿಕೊಂಡಿದೆ. ಯುವ ಆಟಗಾರರಾದ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್​ಗೆ ಈ ಪಂದ್ಯದಲ್ಲಿ ಅವಕಾಶ ನೀಡಿದೆ. ಅಕ್ಷರ್ ಪಟೇಲ್ ಮತ್ತು ಶಿಖರ್ ಧವನ್​ ಬದಲಿಗೆ ಇವರಿಬ್ಬರು ಆಡಲಿದ್ದಾರೆ.

ಇಂಗ್ಲೆಂಡ್ ತಂಡ ಮಾರ್ಕ್​ ವುಡ್​ ಬದಲಿಗೆ ಟಾಮ್ ಕರ್ರನ್​ರನ್ನು ಕಣಕ್ಕಿಳಿಸುತ್ತಲಿದೆ.

ಭಾರತ : ಇಶಾನ್ ಕಿಶನ್, ಕೆ.ಎಲ್. ರಾಹುಲ್,ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೀ), ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಾಲ್, ಭುವನೇಶ್ವರ್ ಕುಮಾರ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್

ಇಂಗ್ಲೆಂಡ್ : ಇಯಾನ್ ಮಾರ್ಗನ್ (ನಾಯಕ), ಜೋಸ್ ಬಟ್ಲರ್, ಜೇಸನ್ ರಾಯ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್,ಟಾಮ್ ಕರ್ರನ್, ಸ್ಯಾಮ್ ಕರ್ರನ್, ಟಾಮ್ ಕರ್ರನ್, ಜಾನಿ ಬೈರ್‌ಸ್ಟೋವ್, ಜೋಫ್ರಾ ಆರ್ಚರ್

ABOUT THE AUTHOR

...view details