ಕರ್ನಾಟಕ

karnataka

ಆಸ್ಟ್ರೇಲಿಯಾ ವಿರುದ್ಧ ಟಾಸ್​ ಗೆದ್ದ ಭಾರತ ಬೌಲಿಂಗ್; ಅಯ್ಯರ್​, ಸೂರ್ಯಗೆ ಪರೀಕ್ಷೆ

By ETV Bharat Karnataka Team

Published : Sep 22, 2023, 1:25 PM IST

India vs Australia ODI series: ಇಂದಿನಿಂದ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರು ಏಕ ದಿನಗಳ ಸರಣಿ ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಟಾಸ್​ ಗೆದ್ದಿರುವ ಭಾರತ ತಂಡ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

India vs Australia ODI series  Team India won the toss  India won the toss opt to bowl  India vs Australia 1st ODI  Australia tour of India 2023  Punjab Cricket Association IS Bindra Stadium  ಕಾಂಗೂರು ವಿರುದ್ಧ ಟಾಸ್​ ಗೆದ್ದ ಭಾರತ ಬೌಲಿಂಗ್​ ಆಯ್ಕೆ  ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರು ಏಕ ದಿನಗಳ ಸರಣಿ  ಮೊದಲ ಪಂದ್ಯದಲ್ಲಿ ಟಾಸ್​ ಗೆದ್ದಿರುವ ಭಾರತ  ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌  ಮೂರು ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಏಕದಿನ ಪಂದ್ಯ  ಶ್ರೇಯಸ್ ಮೇಲೆ ಕಣ್ಣು  ಟೂರ್ನಿಗೂ ಮುನ್ನ ಅವರು ಸೂಪರ್ ಫಾರ್ಮ್‌
ಕಾಂಗೂರು ವಿರುದ್ಧ ಟಾಸ್​ ಗೆದ್ದ ಭಾರತ ಬೌಲಿಂಗ್​ ಆಯ್ಕೆ.. ಅಯ್ಯರ್​, ಸೂರ್ಯಗೆ ಪರೀಕ್ಷೆ

ಮೊಹಾಲಿ (ಪಂಜಾಬ್)​:ತವರಿನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಜ್ಜಾಗಿದೆ. ಮೂರು ಪಂದ್ಯಗಳ ಸರಣಿಯ ಭಾಗವಾಗಿ ಇಂದು ಮೊದಲ ಏಕದಿನ ಪಂದ್ಯ ಮೊಹಾಲಿಯಲ್ಲಿ ನಡೆಯಲಿದೆ. ಟಾಸ್​ ಗೆದ್ದ ಭಾರತ ತಂಡ ಆಸ್ಟ್ರೇಲಿಯಾವನ್ನು ಮೊದಲು ಬ್ಯಾಟ್​ ಮಾಡುವಂತೆ ಆಹ್ವಾನಿಸಿದೆ.

ಮೊದಲೆರಡು ಏಕದಿನ ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲದೀಪ್ ಯಾದವ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್‌ ಕೆ.ಎಲ್.ರಾಹುಲ್ ತಂಡ ಮುನ್ನಡೆಸಲಿದ್ದಾರೆ. ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸುವುದು ಟೀಂ ಇಂಡಿಯಾಗೆ ದೊಡ್ಡ ಸವಾಲು ಕೂಡಾ ಹೌದು. ಕಮ್ಮಿನ್ಸ್ ನಾಯಕತ್ವದ ಕಾಂಗರೂ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕಳೆದುಕೊಂಡಿದ್ದರೂ ಉತ್ತಮ ಫಾರ್ಮ್‌ನಲ್ಲಿದೆ.

ಶ್ರೇಯಸ್ ಮೇಲೆ ಕಣ್ಣು:ಶ್ರೇಯಸ್​ ಅಯ್ಯರ್ ಫಿಟ್ ಆಗಿದ್ದಾರೆಯೇ? ಅವರು ವಿಶ್ವಕಪ್‌ನಲ್ಲಿ ಆಡಬಹುದೇ ಎಂಬ ಬಗ್ಗೆ ಎಲ್ಲರಿಗೂ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳ ಗಮನ ಅಯ್ಯರ್​ ಮೇಲಿದೆ. 28ರ ಹರೆಯದ ಶ್ರೇಯಸ್ ಬೆನ್ನುನೋವಿನ ಕಾರಣ ಕಳೆದ ಆರು ತಿಂಗಳಿಂದ ಹೆಚ್ಚು ಕ್ರಿಕೆಟ್ ಆಡಿರಲಿಲ್ಲ. ತಂಡಕ್ಕೆ ಅವರ ಪುನರಾಗಮನದ ಹೊರತಾಗಿಯೂ, ಏಷ್ಯಾಕಪ್‌ನಲ್ಲಿ ಮತ್ತೆ ಬೆನ್ನುನೋವಿನಿಂದ ತೊಂದರೆಗೀಡಾದರು. ಕೇವಲ ಎರಡು ಪಂದ್ಯಗಳನ್ನು ಆಡಿದ್ದು, ಉಳಿದ ಪಂದ್ಯಗಳಿಂದ ಹೊರಗುಳಿದಿರುವುದರಿಂದ ಅವರ ಫಿಟ್ನೆಸ್ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ.

ಶ್ರೇಯಸ್ ಆರೋಗ್ಯವಾಗಿದ್ದಾರೆ ಎಂದು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಹೇಳಿದ್ದಾರೆ. ಆದರೆ ಅವರು ಎಷ್ಟು ಫಿಟ್ ಆಗಿದ್ದಾರೆ ಎಂಬುದು ಈ ಸರಣಿಯ ಮೂಲಕ ತಿಳಿದುಬರಲಿದೆ. ಈ ಪರಿಸ್ಥಿತಿಗಳಲ್ಲಿ ಅವರು ಹೇಗೆ ಫಾರ್ಮ್​ ಕಂಡುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಶ್ರೇಯಸ್ ನಂತರ ಮುಂಬೈನ ಮತ್ತೊಬ್ಬ ಬ್ಯಾಟರ್ ಸೂರ್ಯಕುಮಾರ್ ಯಾದವ್​ಗೆ ಈ ಸರಣಿ ದೊಡ್ಡ ಪರೀಕ್ಷೆಯಾಗಲಿದೆ. ವಿಶ್ವಕಪ್‌ಗೆ ಆಯ್ಕೆಯಾಗಿದ್ದರೂ, ಟಿ20 ಸ್ಟಾರ್‌ನ ಏಕದಿನ ಸಾಮರ್ಥ್ಯದ ಬಗ್ಗೆ ಇನ್ನೂ ಅನುಮಾನಗಳಿವೆ. 27 ಏಕದಿನ ಪಂದ್ಯಗಳ ಸರಾಸರಿ 25ಕ್ಕಿಂತ ಕಡಿಮೆ ಆಗಿದೆ. ಇದು ಅವರ ಪ್ರತಿಭೆ ಮತ್ತು ಸಾಮರ್ಥ್ಯದ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ. ಅಂತಿಮವಾಗಿ ಪ್ರಕಟಗೊಳ್ಳುವ ವಿಶ್ವಕಪ್ ತಂಡದಲ್ಲಿ ಅವರು ಖಚಿತ ಸ್ಥಾನ ಹೊಂದಿಲ್ಲ. ಆದರೆ ಸೂರ್ಯ ತನ್ನನ್ನು ತಾನು ಸಾಬೀತುಪಡಿಸಲು ಮತ್ತು ವಿಶ್ವಕಪ್‌ಗೆ ತಾವೇ ಸರಿಯಾದ ಆಯ್ಕೆ ಎಂದು ತೋರಿಸಲು ಈ ಸರಣಿ ಉತ್ತಮ ಅವಕಾಶವಾಗಿದೆ.

ಟೂರ್ನಿಗೂ ಮುನ್ನ ಅವರು ಸೂಪರ್ ಫಾರ್ಮ್‌ನಲ್ಲಿರಬೇಕು ಎಂದು ತಂಡದ ಆಡಳಿತ ಮಂಡಳಿ ಬಯಸಿದೆ. ಗಿಲ್, ರಾಹುಲ್ ಮತ್ತು ಇಶಾನ್ ಕಿಶನ್ ಫಾರ್ಮ್‌ನಲ್ಲಿರುವ ಭಾರತ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ಗಿಲ್ ಜೊತೆಗೆ ಇಶಾನ್ ಇನ್ನಿಂಗ್ಸ್ ತೆರೆಯುವ ಸಾಧ್ಯತೆ ಇದೆ. ಅಕ್ಷರ್ ಗಾಯದ ಸಮಸ್ಯೆಯಿಂದ ತಂಡಕ್ಕೆ ಅನಿರೀಕ್ಷಿತವಾಗಿ ಬಂದ 37ರ ಹರೆಯದ ಅನುಭವಿ ಸ್ಪಿನ್ನರ್ ಅಶ್ವಿನ್ ಅವಕಾಶವನ್ನು ಬಳಸಿಕೊಳ್ಳಲು ಬಯಸಿದ್ದಾರೆ.

ವಾರ್ನರ್ ಮತ್ತು ಸ್ಮಿತ್ ಜೊತೆಗಿನ ಅವರ ಹೋರಾಟ ಅಭಿಮಾನಿಗಳನ್ನು ರಂಜಿಸಲಿದೆ. ಒಂದು ವೇಳೆ ಅಕ್ಷರ್ ಚೇತರಿಸಿಕೊಳ್ಳದಿದ್ದರೆ ಅಶ್ವಿನ್ ವಿಶ್ವಕಪ್​ಗೆ ಆಯ್ಕೆಯಾಗುವ ಉತ್ತಮ ಅವಕಾಶಗಳಿವೆ. ಕುಲದೀಪ್ ಮತ್ತು ಹಾರ್ದಿಕ್ ಇಬ್ಬರೂ ಅಲಭ್ಯವಾಗಿರುವುದರಿಂದ, ಅಶ್ವಿನ್ ಜೊತೆಗೆ ವಾಷಿಂಗ್ಟನ್ ಸುಂದರ್ ಅಂತಿಮ ತಂಡದಲ್ಲಿರಲಿದ್ದಾರೆ. ಇಬ್ಬರೂ ಜಡೇಜಾ ಅವರೊಂದಿಗೆ ಸ್ಪಿನ್ ಬೌಲಿಂಗ್​ ಮಾಡಲಿದ್ದಾರೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಯಾವುದೇ ವೇಗದ ಬೌಲರ್‌ಗಳಿಗೆ ವಿಶ್ರಾಂತಿ ನೀಡಿಲ್ಲ. ಆದರೆ ಬುಮ್ರಾ ಮತ್ತು ಸಿರಾಜ್ ಮೂರು ಪಂದ್ಯಗಳಲ್ಲಿ ಎರಡನ್ನು ಆಡುವ ಸಾಧ್ಯತೆಯಿದೆ.

ಭಾರತದ 11ರ ಬಳಗ: ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್​ ಕೀಪರ್​), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

ಆಸ್ಟ್ರೇಲಿಯಾ 11ರ ಬಳಗ:ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್​ ಕೀಪರ್​), ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ಶಾರ್ಟ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಸೀನ್ ಅಬಾಟ್, ಆಡಮ್ ಝಂಪಾ.

ಇದನ್ನೂ ಓದಿ:ಇಂದಿನಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್‌ ಸರಣಿ: ಟೀಂ ಹೇಗಿದೆ? ಪಂದ್ಯ ನೋಡುವುದು ಎಲ್ಲಿ? ಕಂಪ್ಲೀಟ್‌ ಮಾಹಿತಿ

ABOUT THE AUTHOR

...view details