ರಾಜ್ಕೋಟ್ (ಗುಜರಾತ್):ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಿಂದ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಎಡ ಕ್ವಾಡ್ರೈಸ್ಪ್ಸ್ ಸ್ಟ್ರೈನ್ ನೋವು ಎದುರಿಸುತ್ತಿರುವ ಮತ್ತು ರಾಜ್ಕೋಟ್ ಏಕದಿನ ಪಂದ್ಯಕ್ಕೆ ಷರತ್ತುಬದ್ಧವಾಗಿ ಆಯ್ಕೆಯಾಗಿರುವ ಆಲ್ರೌಂಡರ್ ಇನ್ನೂ ಫಿಟ್ ಆಗಿಲ್ಲ. ಹೀಗಾಗಿ ಕೊನೆಯ ಪಂದ್ಯಕ್ಕೂ ಅಲಭ್ಯರಾಗಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ತರಬೇತಿ ಪಡೆಯುತ್ತಿದ್ದಾರೆ.
ಇವರ ಬದಲಿಗೆ ರವಿಚಂದ್ರನ್ ಅಶ್ವಿನ್ ಮುಂಬರುವ ವಿಶ್ವಕಪ್ನಲ್ಲಿ ಸ್ಪಿನ್ ದಾಳಿಯನ್ನು ಸಮರ್ಥವಾಗಿ ಮುನ್ನಡೆಸಬಹುದು ಎಂಬ ಭರವಸೆ ಮೂಡಿಸಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ಅಶ್ವಿನ್ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿ ನಾಲ್ಕು ವಿಕೆಟ್ ಪಡೆದಿದ್ದಾರೆ. ವಿಶೇಷವಾಗಿ ಇಂದೋರ್ನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಬ್ಯಾಟರ್ಗಳನ್ನು ಕಟ್ಟಿಹಾಕಿ ಉನ್ನತ ದರ್ಜೆಯ ಬೌಲಿಂಗ್ ಕೌಶಲ್ಯ ಪ್ರದರ್ಶಿಸಿದ್ದಾರೆ. ಇದು ವಿಶ್ವಕಪ್ ತಂಡದಲ್ಲಿ ಅಶ್ವಿನ್ರನ್ನು ಸೇರಿಸಿಕೊಳ್ಳುವುದಕ್ಕೆ ಪ್ರಮುಖ ಕಾರಣವಾಗುತ್ತಿದೆ. ಬಿಸಿಸಿಐ ಮೂಲಗಳು ಹೇಳುವಂತೆ, ಅಶ್ವಿನ್ಗಿಂತ ಮುಂಚಿತವಾಗಿ ಆಯ್ಕೆಯಾದ ಅಕ್ಸರ್, ವಿಶ್ವಕಪ್ ಸಮಯಕ್ಕೆ ತಂಡಕ್ಕೆ ಮರಳಲಿದ್ದಾರೆ.
ಅಕ್ಸರ್ ವಿಶ್ವಕಪ್ ಅಭ್ಯಾಸ ಪಂದ್ಯಗಳಿಗೆ ಸಿದ್ಧವಾಗಬಹುದೆಂಬ ಸೂಚನೆಗಳಿವೆ. ಇದು ಭಾರತ ತಂಡವನ್ನು ಗಂಭೀರ ಸಂದಿಗ್ಧತೆಗೆ ಸಿಲುಕಿಸಬಹುದು. ಈ ಹಂತದಲ್ಲಿ ಅಶ್ವಿನ್ ಅವರ ಪ್ರದರ್ಶನ ಆಶಾದಾಯಕವಾಗಿದೆ. ಅಷ್ಟೇ ಅಲ್ಲ, ಮುಂಬರುವ ವಿಶ್ವಕಪ್ಗೆ ಅಕ್ಸರ್ ಅವರ ಬದಲಿ ಆಟಗಾರನನ್ನು ಆಯ್ಕೆಗಾರರು ಇನ್ನೂ ಘೋಷಿಸಿಲ್ಲ.