ಕರ್ನಾಟಕ

karnataka

ವೀಕೆಂಡ್ ಕರ್ಫ್ಯೂಗೂ ಡೋಂಟ್​​ ಕೇರ್​​​: ಬನಶಂಕರಿ ಜಾತ್ರೆಗೆ ಪಾದಯಾತ್ರೆ ಮೂಲಕ ಹೊರಟ ಭಕ್ತರು

By

Published : Jan 15, 2022, 7:59 PM IST

Weekend rules break in Bagalkot
ವೀಕೆಂಡ್ ಕರ್ಫ್ಯೂ ನಡುವೆಯೂ ಬನಶಂಕರಿ ಜಾತ್ರೆಗೆ ಪಾದಯಾತ್ರೆ ಮೂಲಕ ಹೊರಟ ಭಕ್ತರು ()

Weekend curfew in Karnataka: ರಾಜ್ಯದಲ್ಲಿ ಕೋವಿಡ್​​ ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂಗೂ ಬೆಲೆ ಕೊಡದೆ ಬಾಗಲಕೋಟೆಯಲ್ಲಿ ಜನತೆ ಬನಶಂಕರಿ ಜಾತ್ರೆಗೆ ಪಾದಯಾತ್ರೆ ಕೈಗೊಂಡಿದ್ದಾರೆ.

ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ಕೇಸ್​ ನಿಯಂತ್ರಿಸುವ ಸಲುವಾಗಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಜಿಲ್ಲೆಯಲ್ಲಿ ಸರ್ಕಾರದ ನಿಯಮವನ್ನು ಮೀರಿ ಜಾತ್ರೆಯ ನಿಮಿತ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಹೂರಟಿದ್ದಾರೆ.

ವೀಕೆಂಡ್ ಕರ್ಫ್ಯೂ ನಡುವೆಯೂ ಬನಶಂಕರಿ ಜಾತ್ರೆಗೆ ಪಾದಯಾತ್ರೆ ಮೂಲಕ ಹೊರಟ ಭಕ್ತರು

ಪ್ರತಿವರ್ಷ ಬಾದಾಮಿಯ ಬನಶಂಕರಿ ದೇವಿಯ ಜಾತ್ರೆಗೆ ಇಳಕಲ್ ಪಟ್ಟಣದಿಂದ ಪಾದಯಾತ್ರೆ ಮೂಲಕ ಹೋಗುವುದು ವಾಡಿಕೆ ಇದೆ. ಅದರಂತೆ ಇಂದು ಸಹ ಇಲಕಲ್ಲ ಪಟ್ಟಣದಿಂದ ಸಾಮೂಹಿಕವಾಗಿ ಭಕ್ತರು ಪಾದಯಾತ್ರೆ ನಡೆಸಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಸೇರಿದಂತೆ ಕೋವಿಡ್​​ ನಿಯಮವನ್ನು ಗಾಳಿಗೆ ತೂರಿ ಬನಶಂಕರಿ ಜಾತ್ರೆಗಾಗಿ ಪಾದಯಾತ್ರೆ ಹೊರಟಿರುವುದು ಆತಂಕಕ್ಕೆ ಕಾರಣವಾಗಿದೆ.

ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಪಾದಯಾತ್ರೆ ಮೂಲಕ ಜಾತ್ರೆಗೆ ಹೋಗುತ್ತಾರೆ. ಇಲಕಲ್ ಪಟ್ಟಣದಿಂದ ಹೂಲಗೇರಿ, ಬಂಡರಗಲ್, ಕಾಟಾಪೂರ, ದಮ್ಮೂರು, ಗುಡೂರು, ಪಟ್ಟದಕಲ್, ಶಿವಯೋಗ ಮಂದಿದ ಮೂಲಕ ಬನಶಂಕರಿ ಹೋಗಿ ತಲುಪುತ್ತಾರೆ. ಇಲಕಲ್ ಮಾತ್ರವಲ್ಲದೆ ಪಕ್ಕದ ರಾಯಚೂರು, ಕೊಪ್ಪಳ ಜಿಲ್ಲೆಯಿಂದಲೂ ಭಕ್ತರು ತೆರಳುತ್ತಾರೆ.

ಶನಿವಾರ ನಸುಕಿನ ಜಾವದಿಂದ ಪಾದಯಾತ್ರೆ ಪ್ರಾರಂಭಿಸಿ ಮಾರ್ಗ ಮಧ್ಯ ಅಲ್ಲಲ್ಲಿ ಭಕ್ತರಿಂದ ಉಚಿತ ಪ್ರಸಾದ ವ್ಯವಸ್ಥೆ ಸಹ ನಡೆದಿರುತ್ತದೆ. ಅಂದಾಜು 50 ರಿಂದ 55 ಕಿ.ಮೀ. ಪಾದಯಾತ್ರೆ‌ ಮೂಲಕ ಬನಶಂಕರಿ ಜಾತ್ರೆಗೆ ತೆರಳಿದ್ದಾರೆ. ಜ. 17 ರಂದು ಬನದ ಹುಣ್ಣಿಮೆ ದಿನ ಬನಶಂಕರಿ ಜಾತ್ರೆ ನಡೆಯುತ್ತಿದ್ದು, ಜಾತ್ರೆ ಮುನ್ನಾ ದಿನ ತಲುಪಲು ಒಂದು ದಿನ ಮುಂಚಿತವಾಗಿ ತಲುಪುತ್ತಾರೆ.

ಒಂದು ತಿಂಗಳು ಕಾಲ ನಡೆಯುವ ಬನಶಂಕರಿ ಜಾತ್ರೆಯಲ್ಲಿ ಲಕ್ಷಾಂತರ ಜನರು ಸೇರುವ ಕಾರಣಕ್ಕೆ ಜಿಲ್ಲಾಡಳಿತ ಈ ಬಾರಿ ಜಾತ್ರೆಯನ್ನು ರದ್ದು ಮಾಡಿದೆ. ಆದರೂ ಸಾವಿರಾರು ಭಕ್ತರು ಜಾತ್ರೆಗೆ ಪ್ರತಿವರ್ಷದಂತೆ ಹೊರಟಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿಂದು 32,793 ಕೊರೊನಾ ಕೇಸ್​ ಪತ್ತೆ: ಪಾಸಿಟಿವಿಟಿ ದರ 15%ಕ್ಕೆ ಏರಿಕೆ

ABOUT THE AUTHOR

...view details