ದೊಡ್ಡಬಳ್ಳಾಪುರ: ಹಬ್ಬ ಹರಿದಿನಗಳ ಸಮಯದಲ್ಲಿ ಅಲಂಕಾರಕ್ಕೆ ಬಳಸಲಾಗುವ ತೆಂಗಿನ ಗರಿ ಕದ್ದು ಮಾರುವ ಗ್ಯಾಂಗ್ ಅನ್ನು ದೊಡ್ಡಬಳ್ಳಾಪುರ ಪೊಲೀಸರು ಪತ್ತೆ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ದೊಡ್ಡಬಳ್ಳಾಪುರ ಸುತ್ತಮುತ್ತಲಿನ ತೆಂಗಿನ ತೋಟಕ್ಕೆ ರಾತ್ರೋರಾತ್ರಿ ನುಗ್ಗುತ್ತಿದ್ದ ಈ ಗ್ಯಾಂಗ್ ತೆಂಗಿನ ಗರಿಗಳನ್ನ ಕಳ್ಳತನ ಮಾಡುತ್ತಿದ್ದರು. ತೆಂಗಿನ ಗಿಡ ಮಾಲೀಕರು ಮೊದ ಮೊದಲು ತೆಂಗಿನ ಗರಿ ಕಳವು ಸಾಮಾನ್ಯ ಎಂದು ತಿಳಿದು ಸುಮ್ಮನಾಗಿದ್ದರು. ಆದರೆ, ದಿನೇ ದಿನೆ ತೆಂಗಿನ ಗರಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ರೈತರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು.
ತೆಂಗಿನ ಗರಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ, ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಡಿವೈಎಸ್ಪಿ ರಂಗಪ್ಪ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸತೀಶ್ ನೇತೃತ್ವದ ಪೊಲೀಸ್ ತಂಡ ತೆಂಗಿನ ಗರಿ ಗ್ಯಾಂಗ್ ಪತ್ತೆ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಬೊಲೆರೋ ವಾಹನವನ್ನ ವಶಕ್ಕೆ ಪಡೆದಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.