ಕರ್ನಾಟಕ

karnataka

ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ : ಸಾಫ್ಟ್‌ವೇರ್ ಸಿದ್ಧಪಡಿಸಿದ್ದು 17 ವರ್ಷದ ಬಾಲಕ?

By

Published : May 23, 2022, 2:49 PM IST

ದುಷ್ಕರ್ಮಿಗಳು ಇದೇ ಸಾಫ್ಟ್‌ವೇರ್‌ನಿಂದ ಬೆಂಗಳೂರು ಹಾಗೂ ಭೂಪಾಲ್ ಶಾಲೆಗಳಿಗೆ ಬೆದರಿಕೆ ಇಮೇಲ್ ಕಳಿಸಿದ್ದರು ಎಂದು ತಿಳಿದು ಬಂದಿದೆ. 17 ವರ್ಷದ ಬಾಲಕನ‌‌ ಮುಖಾಂತರ ಆರೋಪಿಗಳ ಪತ್ತೆಗೆ ನಗರ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ..
ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ
ಬೆಂಗಳೂರು ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ

ಬೆಂಗಳೂರು: ಕಳೆದ‌ ಏಪ್ರಿಲ್​​ನಲ್ಲಿ ರಾಜಧಾನಿಯ 10ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಕರೆ‌ ಪ್ರಕರಣಕ್ಕೆ ತಿರುವು ದೊರೆತಿದೆ. ಹುಸಿ ಬಾಂಬ್ ಇ-ಮೇಲ್ ಕಳಿಸುವುದಕ್ಕೆ ಮೂಲ‌‌ 17 ವರ್ಷದ ಬಾಲಕ ಎಂದು ತಿಳಿದು ಬಂದಿದೆ.

ತಮಿಳುನಾಡು ಮೂಲದ 17 ವರ್ಷದ ಬಾಲಕನೇ ಇ-ಮೇಲ್‌ಗಳ ಮಾಸ್ಟರ್ ಮೈಂಡ್ ಆಗಿದ್ದಾನೆ ಎಂದು ಹೇಳಲಾಗ್ತಿದೆ. ಹುಸಿ ಬಾಂಬ್ ಕರೆಯ ಕೆಲ‌ದಿನಗಳ ಹಿಂದೆ ಭೂಪಾಲ್​​ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ ಮಾಡಿ ಬಾಂಬ್ ಇಟ್ಟಿರುವುದಾಗಿ ಹುಸಿ‌ ಸಂದೇಶ ಕಳುಹಿಸಿದ್ದರು.

ಈ ಸಂಬಂಧ‌ ಅಲ್ಲಿನ ಪೊಲೀಸರು‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಈ ನಡುವೆ ಬೆಂಗಳೂರಿನ ಕೆಲ ಶಾಲೆಗಳಿಗೂ ಬೆದರಿಕೆ ಕರೆ ಬಂದಿತ್ತು‌‌.‌ ಈ‌ ಸಂಬಂಧ‌ ಮಾಹಿತಿ ಹಂಚಿಕೊಂಡ ಎರಡು ರಾಜ್ಯಗಳ‌ ಪೊಲೀಸರು ಬೆದರಿಕೆ ಬಂದಿದ್ದ ಎರಡು‌ ಇಮೇಲ್‌ಗಳ ಐಪಿ ಅಡ್ರೆಸ್ ಪತ್ತೆ ಮಾಡಿದ್ದಾರೆ.

ಮೂಲತಃ ತಮಿಳುನಾಡಿನ ಮೂಲದವನಾಗಿರುವ 17 ವರ್ಷದ ಬಾಲಕ ಸಾಫ್ಟ್‌ವೇರ್ ಕಂಪನಿ ಮಾಡುವ ಆಶಯ ಹೊಂದಿದ್ದಾನಂತೆ. ಮಲ್ಟಿಪಲ್ ಮೇಲ್ ಕಳಿಸುವ ಬೋಟ್ ಸಾಫ್ಟ್‌ವೇರ್ ಫ್ರೋಗಾಂ ಸಿದ್ಧಪಡಿಸಿದ್ದ. ಬಳಿಕ ವಿದೇಶಿಯರಿಗೆ ಕಂಪ್ಯೂಟರ್ ಪ್ರೊಗ್ರಾಮ್ ಮಾರಾಟ ಮಾಡಿದ್ದನಂತೆ.

ದುಷ್ಕರ್ಮಿಗಳು ಇದೇ ಸಾಫ್ಟ್‌ವೇರ್‌ನಿಂದ ಬೆಂಗಳೂರು ಹಾಗೂ ಭೂಪಾಲ್ ಶಾಲೆಗಳಿಗೆ ಬೆದರಿಕೆ ಇಮೇಲ್ ಕಳಿಸಿದ್ದರು ಎಂದು ತಿಳಿದು ಬಂದಿದೆ. 17 ವರ್ಷದ ಬಾಲಕನ‌‌ ಮುಖಾಂತರ ಆರೋಪಿಗಳ ಪತ್ತೆಗೆ ನಗರ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಬೆಂಗಳೂರಿನ ಶಾಲೆಗಳಿಗೆ ಬಂದಿದ್ದು ಹುಸಿ ಬಾಂಬ್‌ ಬೆದರಿಕೆ: ಪೋಷಕರ ನಿಟ್ಟುಸಿರು

TAGGED:

ABOUT THE AUTHOR

...view details