ಕರ್ನಾಟಕ

karnataka

ಬೆಂಗಳೂರಿನಲ್ಲಿ ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

By ETV Bharat Karnataka Team

Published : Jan 4, 2024, 4:48 PM IST

Updated : Jan 4, 2024, 8:12 PM IST

ಬೆಂಗಳೂರಿನಲ್ಲಿ ಕೊಡಗು ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆ
ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಕೊಡಗು ಮೂಲದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ಸಂಜೆ ಪೀಣ್ಯ ಠಾಣಾ ವ್ಯಾಪ್ತಿಯ ಚಿಕ್ಕ ಬಿದರಕಲ್ಲು ಬಳಿ ನಡೆದಿದೆ. ವಿಶು ಉತ್ತಪ್ಪ (19) ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಶು ಉತ್ತಪ್ಪ ಆರ್.ಆರ್ ಕಾಲೇಜಿನಲ್ಲಿ ಮೊದಲನೇ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ. ಆತನ ತಂದೆ ಖಾಸಗಿ ನೈಸ್ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಸಂಜೆ 4:30ರ ಸುಮಾರಿಗೆ ಮನೆಯಲ್ಲಿ ಯಾರೂ ಇರದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ ಡಿ.ಡಿ. ತಮ್ಮಯ್ಯ ಮನೆಗೆ ಬಂದಾಗ ಮಗನ ಸ್ಥಿತಿ ಕಂಡು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ವಿಶು ಉತ್ತಪ್ಪ ಸಾವನ್ನಪ್ಪಿದ್ದಾನೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಥಮ ಪಿಯುಸಿಯಲ್ಲಿ ಎರಡು ಬಾರಿ ಫೇಲಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ

Last Updated : Jan 4, 2024, 8:12 PM IST

ABOUT THE AUTHOR

...view details